ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ಕಳ್ಳ ಸಾಗಣೆ ಪ್ರಕರಣ: ಕಸ್ಟಮ್ಸ್‌ ನಿಂದಲೂ ಶಿವಶಂಕರ್‌ ಬಂಧನ

Last Updated 24 ನವೆಂಬರ್ 2020, 8:18 IST
ಅಕ್ಷರ ಗಾತ್ರ

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್‌ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಬಂಧಿಸಿದರು.

ಈ ಹಿಂದೆ ಪ್ರಕರಣ ಸಂಬಂಧ ಶಿವಶಂಕರ್‌ ಅನ್ನುಇ.ಡಿ ಬಂಧಿಸಿತ್ತು. ಮಂಗಳವಾರ ಬೆಳಿಗ್ಗೆ ಶಿವಶಂಕರ್‌ ಅವರನ್ನು ಇರಿಸಲಾಗಿರುವ ಜೈಲಿಗೆ ಕಸ್ಟಮ್‌ ಆಯುಕ್ತರು ಭೇಟಿ ನೀಡಿ, ಶಿವಶಂಕರ್‌ ಬಂಧನವನ್ನು ಔಪಚಾರಿಕವಾಗಿ ದಾಖಲಿಸಿದರು.

ಶಿವಶಂಕರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರನ್ನು ಬಂಧಿಸುವ ಕುರಿತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಕಸ್ಟಮ್ಸ್‌ಗೆ ಸೋಮವಾರ ಅನುಮತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT