<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆಯನ್ನು ಸೃಷ್ಟಿಸಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ.</p>.<p>ತಮ್ಮ ಹೆಸರಿನಲ್ಲಿ ಸೃಷ್ಠಿಸಲಾಗಿರುವ ನಕಲಿ ಖಾತೆಯನ್ನು ಬಳಸಿಕೊಂಡು, ಕೆಲವು ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜನರು ಜಾಗೃತರಾಗಿರಿ ಮತ್ತು ಅಂತಹ ಸಂದೇಶಗಳ ಕಡೆ ಗಮನಹರಿಸಬೇಡಿ ಎಂದು ಅರ್ಲೇಕರ್ ಸೋಮವಾರ ಹೇಳಿದ್ದಾರೆ. </p>.<p>ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ದೂರನ್ನು ದಾಖಲಿಸಿದ್ದಾರೆ ಹಾಗೂ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.</p>.<p>ಕಳೆದ ವರ್ಷ, ಶಂಕಿತ ಸೈಬರ್ ಕ್ರಿಮಿನಲ್ಗಳು ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ ಹಣ ಪಡೆಯಲು ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯಂತಹ ಹಿರಿಯ ನಾಯಕರ ಹೆಸರನ್ನು ಬಳಸಿಕೊಂಡು ವಂಚಿಸಿದ್ದರು.</p>.<p>ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು 18,000 ಸೈಬರ್ ಅಪರಾಧದ ಪ್ರಕರಣಗಳು ವರದಿಯಾಗಿವೆ<strong>.</strong> ಇವುಗಳಲ್ಲಿ ಶೇ 50ರಷ್ಟು ಹಣಕಾಸು ವಂಚನೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<p>ಇದನ್ನು ಓದಿ: <a href="https://www.prajavani.net/india-news/i-will-rather-die-than-join-hands-with-bjp-againbihar-cm-nitishkumar-1010963.html" itemprop="url">ಸಾಯುತ್ತೇನೆಯೇ ಹೊರತು ಬಿಜೆಪಿಯೊಂದಿಗೆ ಮತ್ತೆ ಕೈ ಜೋಡಿಸುವುದಿಲ್ಲ: ನಿತೀಶ್ ಕುಮಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆಯನ್ನು ಸೃಷ್ಟಿಸಿ, ಹಣಕ್ಕಾಗಿ ಬೇಡಿಕೆ ಇಡಲಾಗಿದೆ.</p>.<p>ತಮ್ಮ ಹೆಸರಿನಲ್ಲಿ ಸೃಷ್ಠಿಸಲಾಗಿರುವ ನಕಲಿ ಖಾತೆಯನ್ನು ಬಳಸಿಕೊಂಡು, ಕೆಲವು ಕಿಡಿಗೇಡಿಗಳು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಜನರು ಜಾಗೃತರಾಗಿರಿ ಮತ್ತು ಅಂತಹ ಸಂದೇಶಗಳ ಕಡೆ ಗಮನಹರಿಸಬೇಡಿ ಎಂದು ಅರ್ಲೇಕರ್ ಸೋಮವಾರ ಹೇಳಿದ್ದಾರೆ. </p>.<p>ಈ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರು ದೂರನ್ನು ದಾಖಲಿಸಿದ್ದಾರೆ ಹಾಗೂ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಈಗಾಗಲೇ ಸಂಬಂಧಪಟ್ಟವರಿಗೆ ಸೂಚಿಸಿದ್ದಾರೆ.</p>.<p>ಕಳೆದ ವರ್ಷ, ಶಂಕಿತ ಸೈಬರ್ ಕ್ರಿಮಿನಲ್ಗಳು ವೈದ್ಯಕೀಯ ತುರ್ತು ಪರಿಸ್ಥಿತಿಯ ನೆಪದಲ್ಲಿ ಹಣ ಪಡೆಯಲು ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿಯಂತಹ ಹಿರಿಯ ನಾಯಕರ ಹೆಸರನ್ನು ಬಳಸಿಕೊಂಡು ವಂಚಿಸಿದ್ದರು.</p>.<p>ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು 18,000 ಸೈಬರ್ ಅಪರಾಧದ ಪ್ರಕರಣಗಳು ವರದಿಯಾಗಿವೆ<strong>.</strong> ಇವುಗಳಲ್ಲಿ ಶೇ 50ರಷ್ಟು ಹಣಕಾಸು ವಂಚನೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<p>ಇದನ್ನು ಓದಿ: <a href="https://www.prajavani.net/india-news/i-will-rather-die-than-join-hands-with-bjp-againbihar-cm-nitishkumar-1010963.html" itemprop="url">ಸಾಯುತ್ತೇನೆಯೇ ಹೊರತು ಬಿಜೆಪಿಯೊಂದಿಗೆ ಮತ್ತೆ ಕೈ ಜೋಡಿಸುವುದಿಲ್ಲ: ನಿತೀಶ್ ಕುಮಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>