<p><strong>ನವದೆಹಲಿ</strong>: ಡಿಜಿಟಲ್ ಕ್ಷೇತ್ರದ ಪ್ರಗತಿ ಹೊಸ ಸವಾಲುಗಳನ್ನು ಒಡ್ಡುತ್ತಿದೆ. ಸೈಬರ್ ಭದ್ರತೆ ಆಂತರಿಕ, ದೇಶದ ರಕ್ಷಣೆಗೆ ಪೂರಕವಾಗಿವೆ. ಕೆಲ ದೇಶಗಳು ಮೂಲಸೌಲಭ್ಯವನ್ನು ಅಸ್ಥಿರಗೊಳಿಸಲು ಸೈಬರ್ ಪಡೆ ರಚಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p class="title">ಸೈಬರ್ ಸುರಕ್ಷತೆ, ರಾಷ್ಟ್ರೀಯ ಭದ್ರತೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಸೋಮವಾರ ಮಾತನಾಡಿದ ಅವರು, ‘ಡಿಜಿಟಲ್ ತಂತ್ರಜ್ಞಾನ ಹೆಚ್ಚಿನ ಜನರನ್ನು ತಲುಪುತ್ತಿದ್ದು, ಸಂಬಂಧಿತ ಪರಿಣತರು ಹಾಗೂ ಆಡಳಿತಕ್ಕೆಸೈಬರ್ ಭದ್ರತೆ ನೀಡುವುದೇ ಸವಾಲಾಗಿದೆ’ ಎಂದರು.</p>.<p class="title">ಸೈಬರ್ ಭದ್ರತೆಯು ದೇಶದ ದೃಷ್ಟಿಯಿಂದ ನಿರ್ಣಾಯಕ. ಡಿಜಿಟಲ್ ತಂತ್ರಜ್ಞಾನವು ಇಂದು ಕೆಳಹಂತದವರೆಗೂ ತಲುಪಿದೆ. ಸೈಬರ್ ಭದ್ರತೆ ನೀಡದೇ ಇದ್ದರೆ ಅದು ಪ್ರಗತಿಯ ಮೇಲೂ ಪರಿಣಾಮ ಬೀರಲಿದೆ ಎಂದರು.</p>.<p>ರಾಷ್ಟ್ರೀಯ ಭದ್ರತೆ ಮತ್ತು ಸೈಬರ್ ಭದ್ರತೆ ನಡುವೆ ಸಂಪರ್ಕವಿದೆ. ದೇಶದ ಪ್ರಗತಿ ಸಹಿಸದವರು ಸೈಬರ್ ದಾಳಿ ನಡೆಸುತ್ತಾರೆ. ಹೀಗಾಗಿ, ಲೋಪಕ್ಕೆ ಎಡೆಇಲ್ಲದಂತಹ ಭದ್ರತೆ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು, ಸವಾಲುಗಳ ಬಗ್ಗೆ ಜಾಗರೂಕರಾಗಿರಬೇಕು ಎಂದರು.</p>.<p>ಡಿಜಿಟಲ್ ಚಟುವಟಿಕೆಯು ತೀವ್ರಗತಿಯಲ್ಲಿ ಏರುತ್ತಿದೆ ಎಂದ ಅವರು, 2021–22ನೇ ಸಾಲಿನಲ್ಲಿ ಯುಪಿಐ ವಹಿವಾಟು ಮೊತ್ತ ಒಂದು ಟ್ರಿಲಿಯನ್ ಡಾಲರ್ ದಾಟಿದೆ. ಡಿಜಿಟಲ್ ವಹಿವಾಟು ನಡೆಸುತ್ತಿರುವ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಹೇಳಿದರು.</p>.<p>ಸೈಬರ್ ಸೇವೆಯ ದುರ್ಬಳಕೆ ಹೊಸದಲ್ಲ. ವೈರಸ್ ದಾಳಿ, ಡಾಟಾ ಕಳವು, ಆನ್ಲೈನ್ ಆರ್ಥಿಕ ವಂಚನೆ ಸೇರಿ ಹಲವು ಅಪರಾಧಗಳನ್ನು ಜನರು ಗಮನಿಸಿದ್ದಾರೆ. 2012ರಲ್ಲಿ ಸೈಬರ್ ಅಪರಾಧಗಳ ಸಂಖ್ಯೆ 3,377 ಇದ್ದರೆ, 2020ರಲ್ಲಿ 50 ಸಾವಿರಕ್ಕೆ ಏರಿದೆ ಎಂದರು.</p>.<p>ವಾಸ್ತವ ಸ್ಥಿತಿಯು ಹೀಗಿರುವಾಗ ಸೈಬರ್ ಭದ್ರತೆ ಒದಗಿಸಲು ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಡಿಜಿಟಲ್ ಕ್ಷೇತ್ರದ ಪ್ರಗತಿ ಹೊಸ ಸವಾಲುಗಳನ್ನು ಒಡ್ಡುತ್ತಿದೆ. ಸೈಬರ್ ಭದ್ರತೆ ಆಂತರಿಕ, ದೇಶದ ರಕ್ಷಣೆಗೆ ಪೂರಕವಾಗಿವೆ. ಕೆಲ ದೇಶಗಳು ಮೂಲಸೌಲಭ್ಯವನ್ನು ಅಸ್ಥಿರಗೊಳಿಸಲು ಸೈಬರ್ ಪಡೆ ರಚಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.</p>.<p class="title">ಸೈಬರ್ ಸುರಕ್ಷತೆ, ರಾಷ್ಟ್ರೀಯ ಭದ್ರತೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಸೋಮವಾರ ಮಾತನಾಡಿದ ಅವರು, ‘ಡಿಜಿಟಲ್ ತಂತ್ರಜ್ಞಾನ ಹೆಚ್ಚಿನ ಜನರನ್ನು ತಲುಪುತ್ತಿದ್ದು, ಸಂಬಂಧಿತ ಪರಿಣತರು ಹಾಗೂ ಆಡಳಿತಕ್ಕೆಸೈಬರ್ ಭದ್ರತೆ ನೀಡುವುದೇ ಸವಾಲಾಗಿದೆ’ ಎಂದರು.</p>.<p class="title">ಸೈಬರ್ ಭದ್ರತೆಯು ದೇಶದ ದೃಷ್ಟಿಯಿಂದ ನಿರ್ಣಾಯಕ. ಡಿಜಿಟಲ್ ತಂತ್ರಜ್ಞಾನವು ಇಂದು ಕೆಳಹಂತದವರೆಗೂ ತಲುಪಿದೆ. ಸೈಬರ್ ಭದ್ರತೆ ನೀಡದೇ ಇದ್ದರೆ ಅದು ಪ್ರಗತಿಯ ಮೇಲೂ ಪರಿಣಾಮ ಬೀರಲಿದೆ ಎಂದರು.</p>.<p>ರಾಷ್ಟ್ರೀಯ ಭದ್ರತೆ ಮತ್ತು ಸೈಬರ್ ಭದ್ರತೆ ನಡುವೆ ಸಂಪರ್ಕವಿದೆ. ದೇಶದ ಪ್ರಗತಿ ಸಹಿಸದವರು ಸೈಬರ್ ದಾಳಿ ನಡೆಸುತ್ತಾರೆ. ಹೀಗಾಗಿ, ಲೋಪಕ್ಕೆ ಎಡೆಇಲ್ಲದಂತಹ ಭದ್ರತೆ ಇರುವುದನ್ನು ಖಾತರಿಪಡಿಸಿಕೊಳ್ಳಬೇಕು, ಸವಾಲುಗಳ ಬಗ್ಗೆ ಜಾಗರೂಕರಾಗಿರಬೇಕು ಎಂದರು.</p>.<p>ಡಿಜಿಟಲ್ ಚಟುವಟಿಕೆಯು ತೀವ್ರಗತಿಯಲ್ಲಿ ಏರುತ್ತಿದೆ ಎಂದ ಅವರು, 2021–22ನೇ ಸಾಲಿನಲ್ಲಿ ಯುಪಿಐ ವಹಿವಾಟು ಮೊತ್ತ ಒಂದು ಟ್ರಿಲಿಯನ್ ಡಾಲರ್ ದಾಟಿದೆ. ಡಿಜಿಟಲ್ ವಹಿವಾಟು ನಡೆಸುತ್ತಿರುವ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಹೇಳಿದರು.</p>.<p>ಸೈಬರ್ ಸೇವೆಯ ದುರ್ಬಳಕೆ ಹೊಸದಲ್ಲ. ವೈರಸ್ ದಾಳಿ, ಡಾಟಾ ಕಳವು, ಆನ್ಲೈನ್ ಆರ್ಥಿಕ ವಂಚನೆ ಸೇರಿ ಹಲವು ಅಪರಾಧಗಳನ್ನು ಜನರು ಗಮನಿಸಿದ್ದಾರೆ. 2012ರಲ್ಲಿ ಸೈಬರ್ ಅಪರಾಧಗಳ ಸಂಖ್ಯೆ 3,377 ಇದ್ದರೆ, 2020ರಲ್ಲಿ 50 ಸಾವಿರಕ್ಕೆ ಏರಿದೆ ಎಂದರು.</p>.<p>ವಾಸ್ತವ ಸ್ಥಿತಿಯು ಹೀಗಿರುವಾಗ ಸೈಬರ್ ಭದ್ರತೆ ಒದಗಿಸಲು ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>