ಕಡ್ಲೂರು, ಚಿದಂಬರಂ, ಚೆನ್ನೈ ಸೇರಿದಂತೆ ಕರಾವಳಿ ಸಮೀಪದ 10 ಹೆಚ್ಚು ಜಿಲ್ಲೆಗಳಲ್ಲಿ ಚಂಡಮಾರುತ ತೀವ್ರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಎಲ್ಲಾ ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರದ ವಿಪತ್ತು ನಿರ್ವಹಣಾ ಪಡೆ, ಅರೆಸೇನಾ ಪಡೆಗಳು ಸೇರಿದಂತೆ ವಿವಿಧ ಸಂಸ್ಥೆಗಳು ಸಜ್ಜಾಗಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ತಿಳಿಸಿದ್ದಾರೆ.