<p><strong>ಮುಂಬೈ:</strong> ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ಸರ್ಕಾರದ ನಡುವಣ ತಿಕ್ಕಾಟವನ್ನು ಉಲ್ಲೇಖಿಸಿರುವ ಶಿವಸೇನಾ, ದುರಹಂಕಾರದ ಚಂಡಮಾರುತ ಇನ್ನೂ ಬಂಗಾಳಕೊಲ್ಲಿಯಲ್ಲಿ ಸುಳಿದಾಡುತ್ತಿದೆ ಎಂದು ಹೇಳಿದೆ.</p>.<p>ಅಲ್ಲದೆ ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸರ್ಕಾರವು ಒತ್ತಡ ಹೇರುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರಿಗೆ ಸಂಬಂಧಿಸಿದ ವಿವಾದ ಕುರಿತಂತೆ ಪ್ರತಿಕ್ರಿಯಿಸಿದೆ.</p>.<p>ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಕುರಿತು ಉಲ್ಲೇಖಿಸಲಾಗಿದ್ದು, ರಾಜಕೀಯ ಸೋಲು ಗೆಲುವಿನ ಹೊರತಾಗಿರುವ ಕೇಂದ್ರ ಸರ್ಕಾರವು ವಿಶಾಲವಾದ ದೃಷ್ಟಿಕೋನವನ್ನು ಹೊಂದಿರಬೇಕು. ಇಲ್ಲದಿದ್ದರೆ ದೇಶದ ಏಕತೆಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/kerala-retains-top-rank-in-niti-aayogs-sdg-india-index-2020-21-835666.html" itemprop="url">ದೇಶದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ಕೇರಳ ಪ್ರಥಮ </a></p>.<p>ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ರಾಜೀವ್ ಗಾಂಧಿ, ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅಧಿಕಾರವಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಯಾವುದೇ ರೀತಿಯ ಭಿನ್ನಭಿಪ್ರಾಯಗಳಿರಲಿಲ್ಲ ಎಂದು ತಿಳಿಸಿದೆ.</p>.<p>ಯಸ್ ಚಂಡಮಾರುತ ಬಂದು ಹೋಗಿದೆ. ಆದರೆ ದುರಂಹಕಾರದ ಚಂಡಮಾರತವು ಇನ್ನೂ ಬಂಗಾಳಕೊಲ್ಲಿಯಲ್ಲಿ ಸುಳಿದಾಡುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಂತೆ ಬಂದೋಪಾಧ್ಯಾಯರು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದ ವೇಳೆಯಲ್ಲಿ ಕರೆದ ಚಂಡಮಾರುತ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದಿದೆ.</p>.<p>ರಾಜ್ಯದ ಮುಖ್ಯಮಂತ್ರಿಯ ಆದೇಶಗಳನ್ನು ಪಾಲಿಸುತ್ತಿದ್ದರೆ ಅಧಿಕಾರಿಯು ಹೇಗೆ ಅಪರಾಧಿಯಾಗುತ್ತಾರೆ? ಹಾಗೊಂದು ವೇಳೆ ಪ್ರಧಾನಿ ಸಭೆಯಲ್ಲಿ ಭಾಗವಹಿಸಿದ್ದರೆ ರಾಜ್ಯ ಸರ್ಕಾರವು ಅವರ ಮೇಲೆ ಕ್ರಮ ಕೈಗೊಳ್ಳುತ್ತಿತ್ತು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳದ ಸರ್ಕಾರದ ನಡುವಣ ತಿಕ್ಕಾಟವನ್ನು ಉಲ್ಲೇಖಿಸಿರುವ ಶಿವಸೇನಾ, ದುರಹಂಕಾರದ ಚಂಡಮಾರುತ ಇನ್ನೂ ಬಂಗಾಳಕೊಲ್ಲಿಯಲ್ಲಿ ಸುಳಿದಾಡುತ್ತಿದೆ ಎಂದು ಹೇಳಿದೆ.</p>.<p>ಅಲ್ಲದೆ ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸರ್ಕಾರವು ಒತ್ತಡ ಹೇರುವುದು ಸರಿಯಲ್ಲ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರಿಗೆ ಸಂಬಂಧಿಸಿದ ವಿವಾದ ಕುರಿತಂತೆ ಪ್ರತಿಕ್ರಿಯಿಸಿದೆ.</p>.<p>ಪಕ್ಷದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಈ ಕುರಿತು ಉಲ್ಲೇಖಿಸಲಾಗಿದ್ದು, ರಾಜಕೀಯ ಸೋಲು ಗೆಲುವಿನ ಹೊರತಾಗಿರುವ ಕೇಂದ್ರ ಸರ್ಕಾರವು ವಿಶಾಲವಾದ ದೃಷ್ಟಿಕೋನವನ್ನು ಹೊಂದಿರಬೇಕು. ಇಲ್ಲದಿದ್ದರೆ ದೇಶದ ಏಕತೆಗೆ ಧಕ್ಕೆಯನ್ನುಂಟು ಮಾಡುತ್ತದೆ ಎಂದು ಹೇಳಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/kerala-retains-top-rank-in-niti-aayogs-sdg-india-index-2020-21-835666.html" itemprop="url">ದೇಶದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ಕೇರಳ ಪ್ರಥಮ </a></p>.<p>ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ರಾಜೀವ್ ಗಾಂಧಿ, ನರಸಿಂಹ ರಾವ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅಧಿಕಾರವಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಯಾವುದೇ ರೀತಿಯ ಭಿನ್ನಭಿಪ್ರಾಯಗಳಿರಲಿಲ್ಲ ಎಂದು ತಿಳಿಸಿದೆ.</p>.<p>ಯಸ್ ಚಂಡಮಾರುತ ಬಂದು ಹೋಗಿದೆ. ಆದರೆ ದುರಂಹಕಾರದ ಚಂಡಮಾರತವು ಇನ್ನೂ ಬಂಗಾಳಕೊಲ್ಲಿಯಲ್ಲಿ ಸುಳಿದಾಡುತ್ತಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಂತೆ ಬಂದೋಪಾಧ್ಯಾಯರು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸದ ವೇಳೆಯಲ್ಲಿ ಕರೆದ ಚಂಡಮಾರುತ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದಿದೆ.</p>.<p>ರಾಜ್ಯದ ಮುಖ್ಯಮಂತ್ರಿಯ ಆದೇಶಗಳನ್ನು ಪಾಲಿಸುತ್ತಿದ್ದರೆ ಅಧಿಕಾರಿಯು ಹೇಗೆ ಅಪರಾಧಿಯಾಗುತ್ತಾರೆ? ಹಾಗೊಂದು ವೇಳೆ ಪ್ರಧಾನಿ ಸಭೆಯಲ್ಲಿ ಭಾಗವಹಿಸಿದ್ದರೆ ರಾಜ್ಯ ಸರ್ಕಾರವು ಅವರ ಮೇಲೆ ಕ್ರಮ ಕೈಗೊಳ್ಳುತ್ತಿತ್ತು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>