ಮಂಗಳವಾರ, ಮಹಾರಾಷ್ಟ್ರ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮ ಗಾಳಿಗೆ ಎದ್ದ ಸಮುದ್ರದ ದೈತ್ಯ ಅಲೆಗಳು ಗೇಟ್ವೇ ಆಫ್ ಇಂಡಿಯಾ, ಚೌಪಾಟಿ ಮತ್ತು ಮೆರಿನ್ ಡ್ರೈವ್ ಪ್ರದೇಶದಲ್ಲಿ ಟನ್ಗಟ್ಟಲೆ ಕಸವನ್ನು ತಂದುಹಾಕಿವೆ. ಇದರ ವಿಡಿಯೊಗಳು ವೈರಲ್ ಆಗಿವೆ. ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ.