<p class="bodytext"><strong>ನವದೆಹಲಿ:</strong> ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ‘ತೌಕ್ತೆ’ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 53 ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p class="bodytext">ಈ ತಂಡಗಳನ್ನು ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗುತ್ತಿದೆ ಎಂದು ಎನ್ಡಿಆರ್ಎಫ್ ಪ್ರಧಾನ ನಿರ್ದೇಶಕ ಎಸ್.ಎನ್. ಪ್ರಧಾನ್ ಟ್ವೀಟ್ ಮಾಡಿದ್ದಾರೆ.</p>.<p class="bodytext">ಈ 53 ತಂಡಗಳ ಪೈಕಿ 24 ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಉಳಿದ ತಂಡಗಳು ಸಜ್ಜಾಗಿದ್ದು, ಅಗತ್ಯ ಬಂದಾಗ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.<p class="bodytext">ಪ್ರತಿ ಎನ್ಡಿಆರ್ಎಫ್ ತಂಡವು 40 ಸಿಬ್ಬಂದಿಯನ್ನು ಹೊಂದಿರುತ್ತದೆ. ಅವರ ಬಳಿ ಮರ, ಕಂಬ ಕತ್ತರಿಸುವ ಸಾಧನಗಳು ಇರುತ್ತವೆ. ದೋಣಿ, ಮೂಲ ವೈದ್ಯಕೀಯ ಸಾಮಗ್ರಿ ಸೇರಿದಂತೆ ಇತರ ಪರಿಹಾರ ಸಾಧನಗಳು ಈ ತಂಡಗಳಲ್ಲಿ ಇರುತ್ತವೆ.</p>.<p class="bodytext">ಅರಬ್ಬಿ ಸಮುದ್ರದಲ್ಲಿ ಲಕ್ಷದೀಪದ ಸಮೀಪ ಒತ್ತಡ ಸೃಷ್ಟಿಯಾಗಿದ್ದು, ದೇಶದ ಕರಾವಳಿ ತೀರದ ರಾಜ್ಯಗಳು ಎಚ್ಚರದಿಂದ ಇರಬೇಕು ಎಂದು ಭಾರತೀಯ ಹವಾಮಾನ ಇಲಾಖೆಯ ಸೂಚಿಸಿದೆ.</p>.<p class="bodytext">ಶನಿವಾರ ಬೆಳಿಗ್ಗೆಯಷ್ಟರಲ್ಲಿ ಅಲ್ಲಿ ವಾಯುಭಾರ ಕುಸಿತವಾಗಿ ನಂತರದ 24 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.</p>.<p class="bodytext">ಇದು ಕ್ರಮೇಣ ತೀವ್ರಗೊಂಡು ಉತ್ತರ–ವಾಯವ್ಯ ಗುಜರಾತ್ ಮತ್ತು ನೆರೆಯ ಪಾಕಿಸ್ತಾನ ತೀರದತ್ತ ಸಾಗಲಿದೆ. ಇದೇ 18ರ ಸಂಜೆ ವೇಳೆಗೆ ಚಂಡಮಾರುತವು ಗುಜರಾತ್ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.</p>.<p class="bodytext">ಈ ಚಂಡಮಾರುತಕ್ಕೆ ‘ತೌಕ್ತೆ’ ಎಂದು ಹೆಸರಿಸಲಾಗಿದೆ. ಇದು ಮ್ಯಾನ್ಮಾರ್ ಭಾಷೆಯ ಪದವಾಗಿದ್ದು, ‘ಹಲ್ಲಿ’ ಎಂದರ್ಥ. ಇದು ಭಾರತೀಯ ಕರಾವಳಿಯುದ್ದಕ್ಕೂ ಪ್ರವೇಶಿಸುತ್ತಿರುವ ಈ ವರ್ಷದ ಮೊದಲ ಚಂಡಮಾರುತವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ:</strong> ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗುತ್ತಿರುವ ‘ತೌಕ್ತೆ’ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) 53 ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p class="bodytext">ಈ ತಂಡಗಳನ್ನು ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗುತ್ತಿದೆ ಎಂದು ಎನ್ಡಿಆರ್ಎಫ್ ಪ್ರಧಾನ ನಿರ್ದೇಶಕ ಎಸ್.ಎನ್. ಪ್ರಧಾನ್ ಟ್ವೀಟ್ ಮಾಡಿದ್ದಾರೆ.</p>.<p class="bodytext">ಈ 53 ತಂಡಗಳ ಪೈಕಿ 24 ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಉಳಿದ ತಂಡಗಳು ಸಜ್ಜಾಗಿದ್ದು, ಅಗತ್ಯ ಬಂದಾಗ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p>.<p class="bodytext">ಪ್ರತಿ ಎನ್ಡಿಆರ್ಎಫ್ ತಂಡವು 40 ಸಿಬ್ಬಂದಿಯನ್ನು ಹೊಂದಿರುತ್ತದೆ. ಅವರ ಬಳಿ ಮರ, ಕಂಬ ಕತ್ತರಿಸುವ ಸಾಧನಗಳು ಇರುತ್ತವೆ. ದೋಣಿ, ಮೂಲ ವೈದ್ಯಕೀಯ ಸಾಮಗ್ರಿ ಸೇರಿದಂತೆ ಇತರ ಪರಿಹಾರ ಸಾಧನಗಳು ಈ ತಂಡಗಳಲ್ಲಿ ಇರುತ್ತವೆ.</p>.<p class="bodytext">ಅರಬ್ಬಿ ಸಮುದ್ರದಲ್ಲಿ ಲಕ್ಷದೀಪದ ಸಮೀಪ ಒತ್ತಡ ಸೃಷ್ಟಿಯಾಗಿದ್ದು, ದೇಶದ ಕರಾವಳಿ ತೀರದ ರಾಜ್ಯಗಳು ಎಚ್ಚರದಿಂದ ಇರಬೇಕು ಎಂದು ಭಾರತೀಯ ಹವಾಮಾನ ಇಲಾಖೆಯ ಸೂಚಿಸಿದೆ.</p>.<p class="bodytext">ಶನಿವಾರ ಬೆಳಿಗ್ಗೆಯಷ್ಟರಲ್ಲಿ ಅಲ್ಲಿ ವಾಯುಭಾರ ಕುಸಿತವಾಗಿ ನಂತರದ 24 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.</p>.<p class="bodytext">ಇದು ಕ್ರಮೇಣ ತೀವ್ರಗೊಂಡು ಉತ್ತರ–ವಾಯವ್ಯ ಗುಜರಾತ್ ಮತ್ತು ನೆರೆಯ ಪಾಕಿಸ್ತಾನ ತೀರದತ್ತ ಸಾಗಲಿದೆ. ಇದೇ 18ರ ಸಂಜೆ ವೇಳೆಗೆ ಚಂಡಮಾರುತವು ಗುಜರಾತ್ ತೀರಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ.</p>.<p class="bodytext">ಈ ಚಂಡಮಾರುತಕ್ಕೆ ‘ತೌಕ್ತೆ’ ಎಂದು ಹೆಸರಿಸಲಾಗಿದೆ. ಇದು ಮ್ಯಾನ್ಮಾರ್ ಭಾಷೆಯ ಪದವಾಗಿದ್ದು, ‘ಹಲ್ಲಿ’ ಎಂದರ್ಥ. ಇದು ಭಾರತೀಯ ಕರಾವಳಿಯುದ್ದಕ್ಕೂ ಪ್ರವೇಶಿಸುತ್ತಿರುವ ಈ ವರ್ಷದ ಮೊದಲ ಚಂಡಮಾರುತವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>