<p><strong>ಐಜ್ವಾಲ್</strong>: ಮಿಜೋರಾಂ ಮತ್ತು ಅಸ್ಸಾಂನ ಗಡಿ ಭಾಗದಲ್ಲಿ ಇತ್ತೀಚೆಗೆ ನಡೆದಿದ್ದ ಸಂಘರ್ಷದಲ್ಲಿ ಬಾಹ್ಯ ಶಕ್ತಿಗಳ ಪಾತ್ರವಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಿಜೋರಾಂನ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಸಂಘಟನೆಯಾದ ಯಂಗ್ ಮಿಜೊ ಅಸೋಸಿಯೇಷನ್ ಅಥವಾ ಸೆಂಟ್ರಲ್ ವೈಎಂಎ (ಸಿವೈಎಂಎ) ಆಗ್ರಹಿಸಿದೆ.</p>.<p>ಸಂಘಟನೆಯ ಸಭೆ ಮಂಗಳವಾರ ನಡೆದಿದ್ದು, ಈ ಕುರಿತು ಕೇಂದ್ರ ಸರ್ಕಾರದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿವೈಎಂಎ ಅಧ್ಯಕ್ಷ ವನ್ಲಾಲ್ರುವಾಟಾ ತಿಳಿಸಿದರು.</p>.<p>ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಉದ್ವಿಗ್ನತೆಯನ್ನು ಹೊರಗಿನ ಶಕ್ತಿಗಳು ಉತ್ತೇಜಿಸಿವೆ ಎಂದು ಆರೋಪಿಸಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನೇತೃತ್ವದ ಈಶಾನ್ಯದ ಬಿಜೆಪಿ ಸಂಸದರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಿಳಿಸಿತ್ತು. ಈ ವೇಳೆ ನಿಯೋಗ ಸಲ್ಲಿಸಿದ್ದ ಮನವಿಯಲ್ಲಿ ಎರಡೂ ರಾಜ್ಯಗಳ ಗಡಿ ಸಮಸ್ಯೆ ಬಗೆಹರಿಸಲು ಪ್ರಧಾನಿಯವರು ಮಧ್ಯ ಪ್ರವೇಶಿಸಬೇಕು ಎಂದು ಕೋರಲಾಗಿತ್ತು.</p>.<p>ಇದಾದ ಮರುದಿನವೇ ಸಿವೈಎಂಎ ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದೆ.</p>.<p>ಅದಾಗ್ಯೂ, ಈ ಆರೋಪ ಸಂಪೂರ್ಣ ಸುಳ್ಳು ಎಂದು ಹೇಳಿರುವ ಸಿವೈಎಂಎ ಅಧ್ಯಕ್ಷರು, ರಿಜಿಜು ಅವರೊಂದಿಗೆ ನಿಯೋಗದಲ್ಲಿ ಮಿಜೋರಾಂನ ಯಾವುದೇ ಸಂಸದರು ಇರಲಿಲ್ಲ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಐಜ್ವಾಲ್</strong>: ಮಿಜೋರಾಂ ಮತ್ತು ಅಸ್ಸಾಂನ ಗಡಿ ಭಾಗದಲ್ಲಿ ಇತ್ತೀಚೆಗೆ ನಡೆದಿದ್ದ ಸಂಘರ್ಷದಲ್ಲಿ ಬಾಹ್ಯ ಶಕ್ತಿಗಳ ಪಾತ್ರವಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಿಜೋರಾಂನ ಅತಿ ದೊಡ್ಡ ಮತ್ತು ಪ್ರಭಾವಶಾಲಿ ಸಂಘಟನೆಯಾದ ಯಂಗ್ ಮಿಜೊ ಅಸೋಸಿಯೇಷನ್ ಅಥವಾ ಸೆಂಟ್ರಲ್ ವೈಎಂಎ (ಸಿವೈಎಂಎ) ಆಗ್ರಹಿಸಿದೆ.</p>.<p>ಸಂಘಟನೆಯ ಸಭೆ ಮಂಗಳವಾರ ನಡೆದಿದ್ದು, ಈ ಕುರಿತು ಕೇಂದ್ರ ಸರ್ಕಾರದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿವೈಎಂಎ ಅಧ್ಯಕ್ಷ ವನ್ಲಾಲ್ರುವಾಟಾ ತಿಳಿಸಿದರು.</p>.<p>ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಉದ್ವಿಗ್ನತೆಯನ್ನು ಹೊರಗಿನ ಶಕ್ತಿಗಳು ಉತ್ತೇಜಿಸಿವೆ ಎಂದು ಆರೋಪಿಸಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನೇತೃತ್ವದ ಈಶಾನ್ಯದ ಬಿಜೆಪಿ ಸಂಸದರ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ತಿಳಿಸಿತ್ತು. ಈ ವೇಳೆ ನಿಯೋಗ ಸಲ್ಲಿಸಿದ್ದ ಮನವಿಯಲ್ಲಿ ಎರಡೂ ರಾಜ್ಯಗಳ ಗಡಿ ಸಮಸ್ಯೆ ಬಗೆಹರಿಸಲು ಪ್ರಧಾನಿಯವರು ಮಧ್ಯ ಪ್ರವೇಶಿಸಬೇಕು ಎಂದು ಕೋರಲಾಗಿತ್ತು.</p>.<p>ಇದಾದ ಮರುದಿನವೇ ಸಿವೈಎಂಎ ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದೆ.</p>.<p>ಅದಾಗ್ಯೂ, ಈ ಆರೋಪ ಸಂಪೂರ್ಣ ಸುಳ್ಳು ಎಂದು ಹೇಳಿರುವ ಸಿವೈಎಂಎ ಅಧ್ಯಕ್ಷರು, ರಿಜಿಜು ಅವರೊಂದಿಗೆ ನಿಯೋಗದಲ್ಲಿ ಮಿಜೋರಾಂನ ಯಾವುದೇ ಸಂಸದರು ಇರಲಿಲ್ಲ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>