ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಟ್ಟಿಭತ್ಯೆ ಬಿಡುಗಡೆ ಆದೇಶ ನಕಲಿ: ಹಣಕಾಸು ಸಚಿವಾಲಯ ಸ್ಪಷ್ಟನೆ

ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ (ಡಿ.ಎ) ಹಾಗೂ ತುಟ್ಟಿಭತ್ಯೆ ಪರಿಹಾರವನ್ನು (ಡಿ.ಆರ್‌) ಬಿಡುಗಡೆ ಮಾಡುವಂತೆ ಆದೇಶಿಸಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಕೊರೊನಾದಿಂದಾಗಿ ತಲೆದೋರಿದ್ದ ಆರ್ಥಿಕ ಬಿಕ್ಕಟ್ಟಿನಿಂದಾಗಿ ತಡೆಹಿಡಿಯಲಾಗಿದ್ದ ಡಿ.ಎ ಮತ್ತು ಡಿ.ಆರ್‌ ಅನ್ನು ಜುಲೈ 1ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಸಾಮಾಜಿಕ ಮಾಧ್ಯಮಗಳಲ್ಲಿಯೂ ಈ ಕುರಿತ ವದಂತಿ ಹರಿದಾಡಿತ್ತು.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೆಯಾಗುತ್ತಿರುವ ಆದೇಶದ ಪ್ರತಿ ನಕಲಿ. ಅಂಥ ಯಾವುದೇ ಆದೇಶ ನೀಡಿಲ್ಲ ಎಂದು ಹಣಕಾಸು ಸಚಿವಾಲಯ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT