<p><strong>ಪುಣೆ</strong>: 2013ರಲ್ಲಿ ನಡೆದ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ಐವರು ಆರೋಪಿಗಳು ದೇಶದ ಜನರಲ್ಲಿ ಭಯ ಹುಟ್ಟಿಸುವಂತಹ ಕೃತ್ಯ ಎಸಗಿದ್ದು, ಇವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ವಿಚಾರಣೆ ನಡೆಸಬೇಕು ಎಂದುಸಿಬಿಐ ಹೇಳಿದೆ.</p>.<p>ಈ ಪ್ರಕರಣದ ಐವರು ಆರೋಪಿಗಳಾದ ಡಾ ವೀರೇಂದ್ರಸಿನ್ಹ ತಾವ್ಡೆ, ಶರದ್ ಕಳಸ್ಕರ್, ಸಚಿನ್ ಅಂದೂರೆ, ವಕೀಲ ಸಂಜೀವ್ ಪುಣಾಲೇಕರ್ ಮತ್ತು ವಿಕ್ರಮ್ ಭಾವೆ ಅವರನ್ನು ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್. ಆರ್. ನವಂದಾರ್ ಎದುರು ಶುಕ್ರವಾರ ಹಾಜರುಪಡಿಸಿದ ವೇಳೆ, ಸಿಬಿಐ ಈ ವಾದ ಮಂಡಿಸಿತು.</p>.<p>ಸಿಬಿಐ ಪರ ವಾದ ಮಂಡಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ, ‘ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಯುಎಪಿಎಯ ವಿವಿಧ ಸೆಕ್ಷನ್ಗಳಡಿ ದೋಷಾರೋಪ ಹೊರಿಸಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಆರೋಪಿಗಳ ವಿರುದ್ಧ ಯುಎಪಿಎ ಸೆಕ್ಷನ್ 16 ಅಡಿ ದೋಷಾರೋಪ ಹೊರಿಸಿದ್ದನ್ನು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ</strong>: 2013ರಲ್ಲಿ ನಡೆದ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ಐವರು ಆರೋಪಿಗಳು ದೇಶದ ಜನರಲ್ಲಿ ಭಯ ಹುಟ್ಟಿಸುವಂತಹ ಕೃತ್ಯ ಎಸಗಿದ್ದು, ಇವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ (ಯುಎಪಿಎ) ವಿಚಾರಣೆ ನಡೆಸಬೇಕು ಎಂದುಸಿಬಿಐ ಹೇಳಿದೆ.</p>.<p>ಈ ಪ್ರಕರಣದ ಐವರು ಆರೋಪಿಗಳಾದ ಡಾ ವೀರೇಂದ್ರಸಿನ್ಹ ತಾವ್ಡೆ, ಶರದ್ ಕಳಸ್ಕರ್, ಸಚಿನ್ ಅಂದೂರೆ, ವಕೀಲ ಸಂಜೀವ್ ಪುಣಾಲೇಕರ್ ಮತ್ತು ವಿಕ್ರಮ್ ಭಾವೆ ಅವರನ್ನು ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್. ಆರ್. ನವಂದಾರ್ ಎದುರು ಶುಕ್ರವಾರ ಹಾಜರುಪಡಿಸಿದ ವೇಳೆ, ಸಿಬಿಐ ಈ ವಾದ ಮಂಡಿಸಿತು.</p>.<p>ಸಿಬಿಐ ಪರ ವಾದ ಮಂಡಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ ಸೂರ್ಯವಂಶಿ, ‘ಆರೋಪಿಗಳ ವಿರುದ್ಧ ಐಪಿಸಿ ಹಾಗೂ ಯುಎಪಿಎಯ ವಿವಿಧ ಸೆಕ್ಷನ್ಗಳಡಿ ದೋಷಾರೋಪ ಹೊರಿಸಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು.</p>.<p>ಆರೋಪಿಗಳ ವಿರುದ್ಧ ಯುಎಪಿಎ ಸೆಕ್ಷನ್ 16 ಅಡಿ ದೋಷಾರೋಪ ಹೊರಿಸಿದ್ದನ್ನು ಸಮರ್ಥಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>