<p><strong>ಕೋಟ(ರಾಜಸ್ಥಾನ): </strong>ದಲಿತ ಬಾಲಕನ ಸಾವು ಖಂಡಿಸಿ ರಾಜಸ್ಥಾನದ ಬಾರಾನ್ ನಗರಸಭೆಯ 12 ಮಂದಿ ಕಾಂಗ್ರೆಸ್ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ ಬೆನ್ನಲ್ಲೇ ನಗರಸಭೆ ಸದಸ್ಯರೂ ಸಹ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ದಲಿತರ ಮೇಲಿನ ದೌರ್ಜನ್ಯವನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.</p>.<p>ಕುಡಿಯುವ ನೀರಿನ ಮಡಕೆ ಮುಟ್ಟಿದ್ದಕ್ಕೆ ಖಾಸಗಿ ಶಾಲಾ ಶಿಕ್ಷಕರೊಬ್ಬರು 9 ವರ್ಷದ ಪರಿಶಿಷ್ಟ ಜಾತಿಯ ಬಾಲಕ ಇಂದ್ರ ಮೇಘವಾಲ್ ಎಂಬುವನನ್ನು ಥಳಿಸಿದ್ದರು. ಶಿಕ್ಷಕರ ದೌರ್ಜನ್ಯಕ್ಕೆ ತುತ್ತಾದ ಬಾಲಕ ಕಳೆದ ಶನಿವಾರ ಮೃತಪಟ್ಟಿದ್ದ.</p>.<p>ಈ ಹಿನ್ನೆಲೆಯಲ್ಲಿ ಬಾರಾನ್–ಅತ್ರು ಕ್ಷೇತ್ರದ ಶಾಸಕ ಪನಾ ಚಂದ್ ಮೇಘವಾಲ್ ಸೋಮವಾರ, ಸಿಎಂ ಗೆಹಲೋತ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.</p>.<p>ಮೃತ ಬಾಲಕನ ಕುಟುಂಬದ ಭೇಟಿಗೆ ಜಲೋರ್ಗೆ ತೆರಳಿರುವ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ದಲಿತ ಸಮುದಾಯದ ನಂಬಿಕೆ ಉಳಿಸಿಕೊಳ್ಳುವ ದೃಷ್ಟಿಯಿಂದ ಈ ಪ್ರಕರಣದಲ್ಲಿ ಕಠಿಣ ಸಂದೇಶ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಬಾರಾನ್ ನಗರಸಭೆಯಲ್ಲಿ 25 ಕಾಂಗ್ರೆಸ್ ಸದಸ್ಯರಿದ್ದು, ಆ ಪೈಕಿ 12 ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ದಲಿತರ ರಕ್ಷಣೆ ವಿಚಾರದಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ, ಶಾಸಕರಿಗೆ ಬೆಂಬಲವಾಗಿ ರಾಜೀನಾಮೆ ಸಲ್ಲಿಸಿರುವುದಾಗಿ 29ನೇ ವಾರ್ಡ್ ಸದಸ್ಯ ಯೋಗೇಂದ್ರ ಮೆಹ್ತಾ ಹೇಳಿದ್ದಾರೆ.</p>.<p>ರೋಹಿತಾಶ್ವ ಸಕ್ಸೇನಾ, ರಾಜಾರಾಮ್ ಮೀನಾ, ರೇಖಾ ಮೀನಾ, ಲೀಲಾಧರ್ ನಗರ್, ಹರಿರಾಜ್ ಎರ್ವಾಲ್, ಪಿಯೂಷ್ ಸೋನಿ, ಊರ್ವಶಿ ಮೇಘವಾಲ್, ಯಶವಂತ್ ಯಾದವ್, ಅನ್ವರ್ ಅಲಿ, ಜ್ಯೋತಿ ಜಾಥವ್, ಮಯಂಕ್ ಮತೋಡಿಯಾ ರಾಜೀನಾಮೆ ಕೊಟ್ಟ ಇತರೆ ಸದಸ್ಯರಾಗಿದ್ದಾರೆ.</p>.<p><a href="https://www.prajavani.net/india-news/rajasthan-pained-cong-mla-resigns-over-death-of-dailt-kid-who-was-beaten-for-touching-water-pot-963655.html" itemprop="url">ಶಿಕ್ಷಕನ ಹೊಡೆತಕ್ಕೆ ಮೃತಪಟ್ಟ ದಲಿತ ವಿದ್ಯಾರ್ಥಿ: ಕಾಂಗ್ರೆಸ್ ಶಾಸಕ ರಾಜೀನಾಮೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟ(ರಾಜಸ್ಥಾನ): </strong>ದಲಿತ ಬಾಲಕನ ಸಾವು ಖಂಡಿಸಿ ರಾಜಸ್ಥಾನದ ಬಾರಾನ್ ನಗರಸಭೆಯ 12 ಮಂದಿ ಕಾಂಗ್ರೆಸ್ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ ಬೆನ್ನಲ್ಲೇ ನಗರಸಭೆ ಸದಸ್ಯರೂ ಸಹ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ದಲಿತರ ಮೇಲಿನ ದೌರ್ಜನ್ಯವನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.</p>.<p>ಕುಡಿಯುವ ನೀರಿನ ಮಡಕೆ ಮುಟ್ಟಿದ್ದಕ್ಕೆ ಖಾಸಗಿ ಶಾಲಾ ಶಿಕ್ಷಕರೊಬ್ಬರು 9 ವರ್ಷದ ಪರಿಶಿಷ್ಟ ಜಾತಿಯ ಬಾಲಕ ಇಂದ್ರ ಮೇಘವಾಲ್ ಎಂಬುವನನ್ನು ಥಳಿಸಿದ್ದರು. ಶಿಕ್ಷಕರ ದೌರ್ಜನ್ಯಕ್ಕೆ ತುತ್ತಾದ ಬಾಲಕ ಕಳೆದ ಶನಿವಾರ ಮೃತಪಟ್ಟಿದ್ದ.</p>.<p>ಈ ಹಿನ್ನೆಲೆಯಲ್ಲಿ ಬಾರಾನ್–ಅತ್ರು ಕ್ಷೇತ್ರದ ಶಾಸಕ ಪನಾ ಚಂದ್ ಮೇಘವಾಲ್ ಸೋಮವಾರ, ಸಿಎಂ ಗೆಹಲೋತ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.</p>.<p>ಮೃತ ಬಾಲಕನ ಕುಟುಂಬದ ಭೇಟಿಗೆ ಜಲೋರ್ಗೆ ತೆರಳಿರುವ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ದಲಿತ ಸಮುದಾಯದ ನಂಬಿಕೆ ಉಳಿಸಿಕೊಳ್ಳುವ ದೃಷ್ಟಿಯಿಂದ ಈ ಪ್ರಕರಣದಲ್ಲಿ ಕಠಿಣ ಸಂದೇಶ ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.</p>.<p>ಬಾರಾನ್ ನಗರಸಭೆಯಲ್ಲಿ 25 ಕಾಂಗ್ರೆಸ್ ಸದಸ್ಯರಿದ್ದು, ಆ ಪೈಕಿ 12 ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ದಲಿತರ ರಕ್ಷಣೆ ವಿಚಾರದಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ, ಶಾಸಕರಿಗೆ ಬೆಂಬಲವಾಗಿ ರಾಜೀನಾಮೆ ಸಲ್ಲಿಸಿರುವುದಾಗಿ 29ನೇ ವಾರ್ಡ್ ಸದಸ್ಯ ಯೋಗೇಂದ್ರ ಮೆಹ್ತಾ ಹೇಳಿದ್ದಾರೆ.</p>.<p>ರೋಹಿತಾಶ್ವ ಸಕ್ಸೇನಾ, ರಾಜಾರಾಮ್ ಮೀನಾ, ರೇಖಾ ಮೀನಾ, ಲೀಲಾಧರ್ ನಗರ್, ಹರಿರಾಜ್ ಎರ್ವಾಲ್, ಪಿಯೂಷ್ ಸೋನಿ, ಊರ್ವಶಿ ಮೇಘವಾಲ್, ಯಶವಂತ್ ಯಾದವ್, ಅನ್ವರ್ ಅಲಿ, ಜ್ಯೋತಿ ಜಾಥವ್, ಮಯಂಕ್ ಮತೋಡಿಯಾ ರಾಜೀನಾಮೆ ಕೊಟ್ಟ ಇತರೆ ಸದಸ್ಯರಾಗಿದ್ದಾರೆ.</p>.<p><a href="https://www.prajavani.net/india-news/rajasthan-pained-cong-mla-resigns-over-death-of-dailt-kid-who-was-beaten-for-touching-water-pot-963655.html" itemprop="url">ಶಿಕ್ಷಕನ ಹೊಡೆತಕ್ಕೆ ಮೃತಪಟ್ಟ ದಲಿತ ವಿದ್ಯಾರ್ಥಿ: ಕಾಂಗ್ರೆಸ್ ಶಾಸಕ ರಾಜೀನಾಮೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>