‘ಹಾಸನದ ಬ್ಲಾಕ್ –3 ಕೈಗಾರಿಕಾ ಪ್ರದೇಶದಲ್ಲಿ ದಲಿತರಿಗೆ ಮಂಜೂರು ಮಾಡಿದ್ದ ಜಾಗದಲ್ಲಿ ಕೆಎಂಎಫ್ ಕಟ್ಟಡ ನಿರ್ಮಿಸುತ್ತಿದೆ. ಕೆಲವರು ಮನೆ ಕಟ್ಟುತ್ತಿದ್ದರೆ, ಹಲವರು ಜೋಳ ಬಿತ್ತನೆ ಮಾಡಿದ್ದಾರೆ. ಜಾಗ ಬಿಡಿಸಿಕೊಡಬೇಕಾದ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಹಣ ಪಾವತಿಸಲು ವಿಳಂಬ ಮಾಡಿದ ಕಾರಣಕ್ಕೆ ಬಡ್ಡಿ ವಿಧಿಸುತ್ತಿದ್ದಾರೆ’ ಎಂದು ಹಾಸನ ಜಿಲ್ಲಾ ದಲಿತ ಉದ್ದಿಮೆದಾರರ ಸಂಘದ ಅಧ್ಯಕ್ಷ ಪ್ರಸನ್ನ ಮತ್ತು ಕಾರ್ಯಾಧ್ಯಕ್ಷ ಸಂತೋಷ್ ಅಳಲು
ತೋಡಿಕೊಂಡರು. ‘ನೆಲಮಂಗಲದಲ್ಲಿ ಕೈಗಾರಿಕಾ ಪ್ರದೇಶಕ್ಕೆ ಹೋಗಲು ದಾರಿಯೇ ಇಲ್ಲ. ವ್ಯಾಜ್ಯದ ಜಾಗಗಳನ್ನೇ ಹುಡುಕಿ ದಲಿತ ಉದ್ದಿಮೆದಾರರಿಗೆ ಹಂಚಿಕೆ ಮಾಡಲಾಗುತ್ತಿದೆ. ದಲಿತ ಉದ್ದಿಮೆದಾರರು ಎದುರಿಸುತ್ತಿರುವ ಸವಾಲುಗಳ ಬಗ್ಗೆ