<p><strong>ಆಲಿಘರ್</strong>: ‘ಉತ್ತರಪ್ರದೇಶದ ಆಲಿಘರ್ನ ಗ್ರಾಮವೊಂದರ ಬಳಿ ಭಾನುವಾರ ಪತ್ತೆಯಾಗಿದ್ದ ದಲಿತ ಬಾಲಕಿಯ ಶವ ಪರೀಕ್ಷೆಯ ವರದಿ ಬಂದಿದ್ದು, ಅತ್ಯಾಚಾರದ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ. ಆದರೆ, ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂಬುದು ವರದಿಯಿಂದ ತಿಳಿದುಬಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಈ ಪ್ರಕರಣ ಸಂಬಂಧ ಐವರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಎಸ್ಪಿ) ಮುನಿರಾಜ್ ಅವರು ತಿಳಿಸಿದರು.</p>.<p>ಭಾನುವಾರ 16 ವರ್ಷದ ಬಾಲಕಿಯ ಶವಅಕ್ರಾಬಾದ್ ಪ್ರದೇಶದಲ್ಲಿ ಪತ್ತೆಯಾಗಿತ್ತು.ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗುತ್ತಿರುವಾಗ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಪ್ರಣೇಂದ್ರ ಕುಮಾರ್ ಅವರು ಗಾಯಗೊಂಡಿದ್ದರು.</p>.<p>‘ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಕುಟುಂಬದವರು ದೂರಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರದ ಯಾವುದೇ ಸ್ಪಷ್ಟ ಪುರಾವೆಗಳು ಸಿಕ್ಕಿಲ್ಲ. ಬಾಲಕಿಯ ಮೈ ಮೇಲೆ ಹಲವು ಗಾಯಗಳಾಗಿವೆ. ಆಕೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ’ ಎಂದು ಅವರು ಹೇಳಿದರು.</p>.<p>ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ. ಸೋಮವಾರ ಬಾಲಕಿಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಬಾಲಕಿಯ ಮನೆಯ ಮುಂದೆ ಹಲವಾರು ಪ್ರತಿಭಟನಕಾರರು ಸೇರಿದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಿಘರ್</strong>: ‘ಉತ್ತರಪ್ರದೇಶದ ಆಲಿಘರ್ನ ಗ್ರಾಮವೊಂದರ ಬಳಿ ಭಾನುವಾರ ಪತ್ತೆಯಾಗಿದ್ದ ದಲಿತ ಬಾಲಕಿಯ ಶವ ಪರೀಕ್ಷೆಯ ವರದಿ ಬಂದಿದ್ದು, ಅತ್ಯಾಚಾರದ ಯಾವುದೇ ಸ್ಪಷ್ಟ ಪುರಾವೆಗಳಿಲ್ಲ. ಆದರೆ, ಬಾಲಕಿಯನ್ನು ಕತ್ತು ಹಿಸುಕಿ ಸಾಯಿಸಲಾಗಿದೆ ಎಂಬುದು ವರದಿಯಿಂದ ತಿಳಿದುಬಂದಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಈ ಪ್ರಕರಣ ಸಂಬಂಧ ಐವರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ(ಎಸ್ಎಸ್ಪಿ) ಮುನಿರಾಜ್ ಅವರು ತಿಳಿಸಿದರು.</p>.<p>ಭಾನುವಾರ 16 ವರ್ಷದ ಬಾಲಕಿಯ ಶವಅಕ್ರಾಬಾದ್ ಪ್ರದೇಶದಲ್ಲಿ ಪತ್ತೆಯಾಗಿತ್ತು.ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗುತ್ತಿರುವಾಗ ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಪ್ರಣೇಂದ್ರ ಕುಮಾರ್ ಅವರು ಗಾಯಗೊಂಡಿದ್ದರು.</p>.<p>‘ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಕುಟುಂಬದವರು ದೂರಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರದ ಯಾವುದೇ ಸ್ಪಷ್ಟ ಪುರಾವೆಗಳು ಸಿಕ್ಕಿಲ್ಲ. ಬಾಲಕಿಯ ಮೈ ಮೇಲೆ ಹಲವು ಗಾಯಗಳಾಗಿವೆ. ಆಕೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ’ ಎಂದು ಅವರು ಹೇಳಿದರು.</p>.<p>ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದೆ. ಸೋಮವಾರ ಬಾಲಕಿಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ವೇಳೆ ಬಾಲಕಿಯ ಮನೆಯ ಮುಂದೆ ಹಲವಾರು ಪ್ರತಿಭಟನಕಾರರು ಸೇರಿದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>