ಏನಿದು ಪ್ರಕರಣ?
ಕೆಲ ದಿನಗಳ ಹಿಂದೆ ರಾಜೇಶ್ ಕುಮಾರ್ ಮೇಘ್ವಾಲ್ ತಮ್ಮ ಫೇಸ್ಬುಕ್ನಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಟೀಕಿಸಿದ್ದರು. ಅಲ್ಲದೆ ದೌರ್ಜನ್ಯಗಳು ಕೇವಲ ಪಂಡಿತರ ಮೇಲಷ್ಟೇ ನಡೆದಿವೆಯೇ, ದಲಿತರ ಮೇಲೆ ನಡೆದಿಲ್ಲವೇ ಎಂದು ಪ್ರಶ್ನಿಸಿದ್ದರು. ಈ ಪೋಸ್ಟ್ಗೆ ಕೆಲವರು ಜೈ ಶ್ರೀರಾಮ್ ಮತ್ತು ಜೈ ಶ್ರೀಕೃಷ್ಣ ಎಂದು ಪ್ರತಿಕ್ರಿಯೆ ನೀಡಿದ್ದರು. ಈ ವೇಳೆ ದೇವರ ಬಗ್ಗೆ ಮೇಘ್ವಾಲ್ ಅವರು ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದರು. ಆದರೆ, ತಮ್ಮ ತಪ್ಪಿನ ಅರಿವಾಗಿ ಮೇಘ್ವಾಲ್ ಅವರು ಕ್ಷಮಾಪಣೆಯನ್ನೂ ಕೋರಿದ್ದರು. ಆದರೆ ಕೆಲವು ಸ್ಥಳೀಯರು ಮೇಘ್ವಾಲ್ ಅವರನ್ನು ದೇವಸ್ಥಾನಕ್ಕೆ ಎಳೆದೊಯ್ದು, ಬಲವಂತದಿಂದ ದೇವಸ್ಥಾನದ ಜಗುಲಿಗೆ ಮೂಗು ತಿಕ್ಕಿಸಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.