<p><strong>ಮುಂಬೈ: </strong>'ಬೆಂಕಿ ಅವಘಡದಿಂದ ಕೋವಿಶೀಲ್ಡ್ ಲಸಿಕೆ ಉತ್ಪಾದನೆ, ಪೂರೈಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ, ಅನಾಹುತದಿಂದ ಸೀರಂ ಇನ್ಸ್ಟಿಟ್ಯೂಟ್ಗೆ ₹1,000 ಕೋಟಿ ನಷ್ಟವಾಗಿದೆ,' ಎಂದು ಸಂಸ್ಥೆಯ ಸಿಇಒ ಆದರ್ ಪೂನಾವಾಲ ಹೇಳಿದ್ದಾರೆ.</p>.<p>ಮುಂಬೈನಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಸೀರಂ ಇನ್ಸ್ಟಿಟ್ಯೂಟ್ನ ಸಿಇಒ ಆದರ್ ಪೂನಾವಾಲ ಈ ವಿಷಯ ಬಹಿರಂಗಪಡಿಸಿದ್ದಾರೆ.</p>.<p>ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆ ಮೇಲೆ ಬೆಂಕಿ ಅವಘಡವು ಯಾವುದೇ ಪರಿಣಾಮ ಬೀರುವುದಿಲ್ಲ. ಹೇಳಬೇಕೆಂದರೆ, ಅನಾಹುತ ಸಂಭವಿಸಿದ ಕಟ್ಟಡದಲ್ಲಿ ಲಸಿಕೆಯ ಉತ್ಪಾದನೆಯೂ ನಡೆಯುತ್ತಿರಲಿಲ್ಲ. ಆದರೆ, ಘಟನೆಯಲ್ಲಿ ಸೀರಂ ಇನ್ಸ್ಟಿಟ್ಯೂಟ್ಗೆ ₹1,000 ಕೋಟ್ ನಷ್ಟ ಸಂಭವಿಸಿದೆ ಎಂದು ಪೂನಾವಾಲ ಹೇಳಿದರು.</p>.<p>ಘಟನೆಯಿಂದ ನಮಗೆ ಆರ್ಥಿಕ ನಷ್ಟ ಸಂಭವಿಸಿದೆ. ಈ ನಷ್ಟವು ಭವಿಷ್ಯದಲ್ಲಿ ಬಿಸಿಜಿ ಮತ್ತು ರೋಟಾ ವೈರಸ್ ಲಸಿಕೆಗಳ ಉತ್ಪಾದನೆ ಮೇಲೆ ಪರಿಣಾಮ ಬೀರಲಿದೆ ಎಂದೂ ಅವರು ಹೇಳಿದರು.</p>.<p>ಬೆಂಕಿಯಿಂದಾಗಿ ಕೋವಿಶೀಲ್ಡ್ ಲಸಿಕೆಯ ಉತ್ಪಾದನೆಗೆ ತೊಂದರೆಯಾಗಿಲ್ಲ. ದಾಸ್ತಾನಿಗೂ ಸಮಸ್ಯೆಯಾಗಿಲ್ಲ ಎಂದು ಪೂನಾವಾಲ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>'ಬೆಂಕಿ ಅವಘಡದಿಂದ ಕೋವಿಶೀಲ್ಡ್ ಲಸಿಕೆ ಉತ್ಪಾದನೆ, ಪೂರೈಕೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ, ಅನಾಹುತದಿಂದ ಸೀರಂ ಇನ್ಸ್ಟಿಟ್ಯೂಟ್ಗೆ ₹1,000 ಕೋಟಿ ನಷ್ಟವಾಗಿದೆ,' ಎಂದು ಸಂಸ್ಥೆಯ ಸಿಇಒ ಆದರ್ ಪೂನಾವಾಲ ಹೇಳಿದ್ದಾರೆ.</p>.<p>ಮುಂಬೈನಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿರುವ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಸೀರಂ ಇನ್ಸ್ಟಿಟ್ಯೂಟ್ನ ಸಿಇಒ ಆದರ್ ಪೂನಾವಾಲ ಈ ವಿಷಯ ಬಹಿರಂಗಪಡಿಸಿದ್ದಾರೆ.</p>.<p>ಕೋವಿಡ್ ಲಸಿಕೆಯ ಉತ್ಪಾದನೆ, ಪೂರೈಕೆ ಮೇಲೆ ಬೆಂಕಿ ಅವಘಡವು ಯಾವುದೇ ಪರಿಣಾಮ ಬೀರುವುದಿಲ್ಲ. ಹೇಳಬೇಕೆಂದರೆ, ಅನಾಹುತ ಸಂಭವಿಸಿದ ಕಟ್ಟಡದಲ್ಲಿ ಲಸಿಕೆಯ ಉತ್ಪಾದನೆಯೂ ನಡೆಯುತ್ತಿರಲಿಲ್ಲ. ಆದರೆ, ಘಟನೆಯಲ್ಲಿ ಸೀರಂ ಇನ್ಸ್ಟಿಟ್ಯೂಟ್ಗೆ ₹1,000 ಕೋಟ್ ನಷ್ಟ ಸಂಭವಿಸಿದೆ ಎಂದು ಪೂನಾವಾಲ ಹೇಳಿದರು.</p>.<p>ಘಟನೆಯಿಂದ ನಮಗೆ ಆರ್ಥಿಕ ನಷ್ಟ ಸಂಭವಿಸಿದೆ. ಈ ನಷ್ಟವು ಭವಿಷ್ಯದಲ್ಲಿ ಬಿಸಿಜಿ ಮತ್ತು ರೋಟಾ ವೈರಸ್ ಲಸಿಕೆಗಳ ಉತ್ಪಾದನೆ ಮೇಲೆ ಪರಿಣಾಮ ಬೀರಲಿದೆ ಎಂದೂ ಅವರು ಹೇಳಿದರು.</p>.<p>ಬೆಂಕಿಯಿಂದಾಗಿ ಕೋವಿಶೀಲ್ಡ್ ಲಸಿಕೆಯ ಉತ್ಪಾದನೆಗೆ ತೊಂದರೆಯಾಗಿಲ್ಲ. ದಾಸ್ತಾನಿಗೂ ಸಮಸ್ಯೆಯಾಗಿಲ್ಲ ಎಂದು ಪೂನಾವಾಲ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>