<p><strong>ದಾಂತೇವಾಡ (ಛತ್ತೀಸಗಡ):</strong> ಜಿಲ್ಲೆಯಲ್ಲಿ ಮಾವೋವಾದಿಗಳು ನಿರಂತರವಾಗಿ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದಾರೆ ಹಾಗೂ ವಿಷಾಹಾರ ಸೇವನೆಯಿಂದ ಬಳಲುತ್ತಿದ್ದಾರೆ. ಅವರು ಶರಣಾದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದುಇಲ್ಲಿನ ಪೊಲೀಸರು ಭರವಸೆ ನೀಡಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ್ ಈ ಸಂಬಂಧ ಮಾತನಾಡಿದ್ದು, ʼಮಾವೋವಾದಿ ಸಂಘಟನೆಗಳ ನಾಯಕರು ಕೋವಿಡ್ ಮತ್ತು ವಿಷಾಹಾರ ಸೇವನೆಯಿಂದ ಬಳಲುತ್ತಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ದಂಡಕಾರಣ್ಯ ವಿಶೇಷ ವಲಯ ಸಮಿತಿ (ಡಿಕೆಎಸ್ಜಡ್ಸಿ) ನಾಯಕಿ ಸುಜಾತಾರಂತಹ ಇನ್ನೂ ಕೆಲ ನಾಯಕರು ಕೋವಿಡ್ನಿಂದ ಬಳಲುತ್ತಿದ್ದಾರೆ. ಸುಜಾತಾಗೆ ಉಸಿರಾಟದ ತೊಂದರೆಯಿದ್ದು, ಚಲಿಸಲು ಸಾಧ್ಯವಾಗುತ್ತಿಲ್ಲʼ ಎಂದು ಮಾಹಿತಿ ನೀಡಿದ್ದಾರೆ.</p>.<p>ಮುಂದುವರಿದು, ʼಮಾವೋವಾದಿಗಳು ಚಿಕಿತ್ಸೆ ಪಡೆಯದೆ ತಮ್ಮ ಜೀವನವನ್ನು ಸಂಕಷ್ಟಕ್ಕೆ ದೂಡಿಕೊಂಡಿದ್ದಾರೆ. ಜೊತೆಗೆ ಗ್ರಾಮಸ್ಥರಿಗೂ ಸೊಂಕು ಹರಡುವ ಮೂಲಕ ಹಾನಿಯುಂಟು ಮಾಡುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.</p>.<p>ʼಇನ್ನೂ ಹಲವು ನಾಯಕರು ಮತ್ತು ಸದಸ್ಯರು ಈ ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಅವಧಿ ಮುಗಿದ ಆಹಾರ ಸೇವಿಸಿದ್ದರಿಂದಲೂ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಮಾವೋವಾದಿಗಳು ಶರಣಾಗಬೇಕು ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆʼ ಎಂದು ಒತ್ತಾಯಿಸಿದ್ದಾರೆ.</p>.<p>ಹಾಗೆಯೇ, ಛತ್ತೀಸಗಡ ಪೊಲೀಸರು ಚಿಕಿತ್ಸೆಗೆ ವ್ಯವಸ್ಥೆ ಮಾಡಲಿದ್ದಾರೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂತೇವಾಡ (ಛತ್ತೀಸಗಡ):</strong> ಜಿಲ್ಲೆಯಲ್ಲಿ ಮಾವೋವಾದಿಗಳು ನಿರಂತರವಾಗಿ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದಾರೆ ಹಾಗೂ ವಿಷಾಹಾರ ಸೇವನೆಯಿಂದ ಬಳಲುತ್ತಿದ್ದಾರೆ. ಅವರು ಶರಣಾದರೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದುಇಲ್ಲಿನ ಪೊಲೀಸರು ಭರವಸೆ ನೀಡಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ್ ಈ ಸಂಬಂಧ ಮಾತನಾಡಿದ್ದು, ʼಮಾವೋವಾದಿ ಸಂಘಟನೆಗಳ ನಾಯಕರು ಕೋವಿಡ್ ಮತ್ತು ವಿಷಾಹಾರ ಸೇವನೆಯಿಂದ ಬಳಲುತ್ತಿದ್ದಾರೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ದಂಡಕಾರಣ್ಯ ವಿಶೇಷ ವಲಯ ಸಮಿತಿ (ಡಿಕೆಎಸ್ಜಡ್ಸಿ) ನಾಯಕಿ ಸುಜಾತಾರಂತಹ ಇನ್ನೂ ಕೆಲ ನಾಯಕರು ಕೋವಿಡ್ನಿಂದ ಬಳಲುತ್ತಿದ್ದಾರೆ. ಸುಜಾತಾಗೆ ಉಸಿರಾಟದ ತೊಂದರೆಯಿದ್ದು, ಚಲಿಸಲು ಸಾಧ್ಯವಾಗುತ್ತಿಲ್ಲʼ ಎಂದು ಮಾಹಿತಿ ನೀಡಿದ್ದಾರೆ.</p>.<p>ಮುಂದುವರಿದು, ʼಮಾವೋವಾದಿಗಳು ಚಿಕಿತ್ಸೆ ಪಡೆಯದೆ ತಮ್ಮ ಜೀವನವನ್ನು ಸಂಕಷ್ಟಕ್ಕೆ ದೂಡಿಕೊಂಡಿದ್ದಾರೆ. ಜೊತೆಗೆ ಗ್ರಾಮಸ್ಥರಿಗೂ ಸೊಂಕು ಹರಡುವ ಮೂಲಕ ಹಾನಿಯುಂಟು ಮಾಡುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.</p>.<p>ʼಇನ್ನೂ ಹಲವು ನಾಯಕರು ಮತ್ತು ಸದಸ್ಯರು ಈ ಕಾಯಿಲೆಯಿಂದ ತೀವ್ರವಾಗಿ ಬಳಲುತ್ತಿದ್ದಾರೆ. ಅವಧಿ ಮುಗಿದ ಆಹಾರ ಸೇವಿಸಿದ್ದರಿಂದಲೂ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಮಾವೋವಾದಿಗಳು ಶರಣಾಗಬೇಕು ಮತ್ತು ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆʼ ಎಂದು ಒತ್ತಾಯಿಸಿದ್ದಾರೆ.</p>.<p>ಹಾಗೆಯೇ, ಛತ್ತೀಸಗಡ ಪೊಲೀಸರು ಚಿಕಿತ್ಸೆಗೆ ವ್ಯವಸ್ಥೆ ಮಾಡಲಿದ್ದಾರೆ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>