<p><strong>ನವದೆಹಲಿ:</strong>ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆಯಡಿ, ಅವಿಭಕ್ತ ಕುಟುಂಬದ ಹೆಣ್ಣುಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮುನ್ನ ಒಂದು ವೇಳೆ ತಂದೆ ತೀರಿಕೊಂಡಿದ್ದರೂ, ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಹ ಸಮಾನ ಹಕ್ಕು ಹೊಂದಿರುತ್ತಾರೆ. ಈ ಕಾಯ್ದೆ ಪೂರ್ವಾನ್ವಯ ಆಗಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಸ್.ನಜೀರ್ ಹಾಗೂ ಎಂ.ಆರ್.ಶಾ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>‘ಕಾಯ್ದೆಯು ತಿದ್ದುಪಡಿಗೊಂಡು ಜಾರಿಗೆ ಬಂದ ನಂತರ ಅಥವಾ ಅದಕ್ಕೂ ಮೊದಲೇ ಜನಿಸಿದ ಗಂಡು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಮೇಲೆ ಯಾವ ಹಕ್ಕುಗಳಿವೆಯೋ ಅವೇ ಹಕ್ಕುಗಳು ಹೆಣ್ಣುಮಕ್ಕಳಿಗೂ ಇವೆ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಈ ಕಾಯ್ದೆಯು ನೀಡಿರುವ ಹಕ್ಕುಗಳಿಂದ ಹೆಣ್ಣುಮಕ್ಕಳು ವಂಚಿತರಾಗಬಾರದು. ಹೀಗಾಗಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳ ಒಳಗಾಗಿ ಇತ್ಯರ್ಥಪಡಿಸಬೇಕು’ ಎಂದೂ ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆಯಡಿ, ಅವಿಭಕ್ತ ಕುಟುಂಬದ ಹೆಣ್ಣುಮಕ್ಕಳಿಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕುಗಳಿವೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.</p>.<p>ತಿದ್ದುಪಡಿ ಕಾಯ್ದೆ ಜಾರಿಗೆ ಬರುವ ಮುನ್ನ ಒಂದು ವೇಳೆ ತಂದೆ ತೀರಿಕೊಂಡಿದ್ದರೂ, ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳು ಸಹ ಸಮಾನ ಹಕ್ಕು ಹೊಂದಿರುತ್ತಾರೆ. ಈ ಕಾಯ್ದೆ ಪೂರ್ವಾನ್ವಯ ಆಗಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಸ್.ನಜೀರ್ ಹಾಗೂ ಎಂ.ಆರ್.ಶಾ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.</p>.<p>‘ಕಾಯ್ದೆಯು ತಿದ್ದುಪಡಿಗೊಂಡು ಜಾರಿಗೆ ಬಂದ ನಂತರ ಅಥವಾ ಅದಕ್ಕೂ ಮೊದಲೇ ಜನಿಸಿದ ಗಂಡು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ಮೇಲೆ ಯಾವ ಹಕ್ಕುಗಳಿವೆಯೋ ಅವೇ ಹಕ್ಕುಗಳು ಹೆಣ್ಣುಮಕ್ಕಳಿಗೂ ಇವೆ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಈ ಕಾಯ್ದೆಯು ನೀಡಿರುವ ಹಕ್ಕುಗಳಿಂದ ಹೆಣ್ಣುಮಕ್ಕಳು ವಂಚಿತರಾಗಬಾರದು. ಹೀಗಾಗಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳ ಒಳಗಾಗಿ ಇತ್ಯರ್ಥಪಡಿಸಬೇಕು’ ಎಂದೂ ನ್ಯಾಯಪೀಠ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>