<p><strong>ಗೋಪೇಶ್ವರ್:</strong> ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಿದೆ. ಜೋಶಿಮಠ ಬಳಿಯ ಮಾರ್ವಾಡಿಯಲ್ಲಿರುವ ಅಲಕಾನಂದ ದಂಡೆಯಲ್ಲಿ ಇನ್ನೊಂದು ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆಯು 72ಕ್ಕೆ ಏರಿಕೆಯಾಗಿದೆ.</p>.<p>72 ನೇ ಶವವು ಶುಕ್ರವಾರ ಸಂಜೆ ತಡವಾಗಿ ಪತ್ತೆಯಾಗಿದೆ. ಈಮಧ್ಯೆ, ಹಿಮಪಾತವಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಶನಿವಾರ 21ನೇ ದಿನವೂ ಮುಂದುವರೆದಿದೆ ಎಂದು ಚಮೋಲಿಯ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ. ಜೋಶಿ ಶನಿವಾರ ತಿಳಿಸಿದ್ದಾರೆ.</p>.<p>ಹಿಮಪಾತಕ್ಕೆ ಒಳಗಾದ ಪ್ರದೇಶಗಳಲ್ಲಿ ಇಲ್ಲಿಯವರೆಗೆ 72 ಶವಗಳು ಮತ್ತು 30 ಮಾನವ ದೇಹದ ಭಾಗಗಳನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 41 ಜನರನ್ನು ಗುರುತಿಸಲಾಗಿದ್ದು, ಇನ್ನೂ 132 ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಫೆಬ್ರವರಿ 7ರಂದು ಸಂಭವಿಸಿದ ದುರಂತದಿಂದ ತಪೋವನ-ವಿಷ್ಣುಗಡ ವಿದ್ಯುತ್ ಯೋಜನೆಯುಹೆಚ್ಚಿನ ಹಾನಿಗೊಳಗಾಗಿತ್ತು. ರಾಜ್ಯ ಸರ್ಕಾರ ಹೊರಡಿಸಿದ ಪಟ್ಟಿಯ ಪ್ರಕಾರ 25 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ 3.52 ಕೋಟಿ ರೂ. ಠೇವಣಿ ಇಡಲಾಗಿದೆ ಎಂದು ಎನ್ಟಿಪಿಸಿಯು ವಕ್ತಾರ ತಿಳಿಸಿದ್ದಾರೆ.</p>.<p>ಕಾಣೆಯಾದವರ ಮರಣ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ನೀಡಿದ ನಂತರ ಉಳಿದ ಕುಟುಂಬಗಳಿಗೂ ಸಹ ಪರಿಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಪೇಶ್ವರ್:</strong> ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗುತ್ತಿದೆ. ಜೋಶಿಮಠ ಬಳಿಯ ಮಾರ್ವಾಡಿಯಲ್ಲಿರುವ ಅಲಕಾನಂದ ದಂಡೆಯಲ್ಲಿ ಇನ್ನೊಂದು ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆಯು 72ಕ್ಕೆ ಏರಿಕೆಯಾಗಿದೆ.</p>.<p>72 ನೇ ಶವವು ಶುಕ್ರವಾರ ಸಂಜೆ ತಡವಾಗಿ ಪತ್ತೆಯಾಗಿದೆ. ಈಮಧ್ಯೆ, ಹಿಮಪಾತವಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಶನಿವಾರ 21ನೇ ದಿನವೂ ಮುಂದುವರೆದಿದೆ ಎಂದು ಚಮೋಲಿಯ ವಿಪತ್ತು ನಿರ್ವಹಣಾ ಅಧಿಕಾರಿ ಎನ್.ಕೆ. ಜೋಶಿ ಶನಿವಾರ ತಿಳಿಸಿದ್ದಾರೆ.</p>.<p>ಹಿಮಪಾತಕ್ಕೆ ಒಳಗಾದ ಪ್ರದೇಶಗಳಲ್ಲಿ ಇಲ್ಲಿಯವರೆಗೆ 72 ಶವಗಳು ಮತ್ತು 30 ಮಾನವ ದೇಹದ ಭಾಗಗಳನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 41 ಜನರನ್ನು ಗುರುತಿಸಲಾಗಿದ್ದು, ಇನ್ನೂ 132 ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಫೆಬ್ರವರಿ 7ರಂದು ಸಂಭವಿಸಿದ ದುರಂತದಿಂದ ತಪೋವನ-ವಿಷ್ಣುಗಡ ವಿದ್ಯುತ್ ಯೋಜನೆಯುಹೆಚ್ಚಿನ ಹಾನಿಗೊಳಗಾಗಿತ್ತು. ರಾಜ್ಯ ಸರ್ಕಾರ ಹೊರಡಿಸಿದ ಪಟ್ಟಿಯ ಪ್ರಕಾರ 25 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರವಾಗಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ 3.52 ಕೋಟಿ ರೂ. ಠೇವಣಿ ಇಡಲಾಗಿದೆ ಎಂದು ಎನ್ಟಿಪಿಸಿಯು ವಕ್ತಾರ ತಿಳಿಸಿದ್ದಾರೆ.</p>.<p>ಕಾಣೆಯಾದವರ ಮರಣ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ನೀಡಿದ ನಂತರ ಉಳಿದ ಕುಟುಂಬಗಳಿಗೂ ಸಹ ಪರಿಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>