ವೇದಿಕೆ ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ‘ಜಮ್ಮು ಮತ್ತು ಕಾಶ್ಮೀರದ ಕಾಯಂ ನಿವಾಸಿಗಳ ಸವಲತ್ತು ಮತ್ತು ಹಕ್ಕುಗಳನ್ನು ರಕ್ಷಿಸಿದ್ದ ‘ವಿಶೇಷ ಸ್ಥಾನಮಾನವನ್ನು‘ ಕೇಂದ್ರ ಸರ್ಕಾರ ಆಗಸ್ಟ್ 5, 2019 ರಂದು ರದ್ದುಗೊಳಿಸಿದ ನಂತರ ಅಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ರಾಜ್ಯವನ್ನು ಎರಡು ಭಾಗಗಳಾಗಿ ವಿಭಜಿಸಿದ ಮೇಲೆ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಕೆಳದರ್ಜೆಗೆ ಇಳಿದಿವೆ‘ ಎಂದು ವಿವರಿಸಲಾಗಿದೆ.