<p><strong>ನವದೆಹಲಿ: </strong>ಪತ್ರಕರ್ತರವನ್ನು ಮುಂಚೂಣಿ ಕೆಲಸಗಾರರು ಎಂದು ಘೋಷಿಸಿ, ಆದ್ಯತೆ ಮೇರೆಗೆ ಕೋವಿಡ್–19ರ ಲಸಿಕೆ ನೀಡಬೇಕು ಎಂದು ಭಾರತೀಯ ಸಂಪಾದಕರ ಕೂಟವು (ಇಜಿಐ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.</p>.<p>ಸಾಂಕ್ರಾಮಿಕ ರೋಗ, ಚುನಾವಣೆ ಮತ್ತು ಇತರ ಪ್ರಚಲಿತ ವಿದ್ಯಮಾನಗಳ ಕುರಿತು ಸುದ್ದಿ ಸಂಸ್ಥೆಗಳು ಬಿಡುವಿಲ್ಲದೆ ಸುದ್ದಿ ಮತ್ತು ಮಾಹಿತಿಯನ್ನು ಓದುಗರಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸುದ್ದಿ ಮಾಧ್ಯಮವನ್ನು ಅಗತ್ಯ ಸೇವೆಗಳ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಲಸಿಕೆ ನೀಡುವುದರ ಮೂಲಕ ರಕ್ಷಣೆಯ ಹೊದಿಕೆ ನೀಡುವುದು ನ್ಯಾಯೋಚಿತ ಎಂದು ಇಜಿಐ ಪ್ರತಿಪಾದಿಸಿದೆ.</p>.<p>ಲಸಿಕೆಯ ರಕ್ಷಣೆ ಇಲ್ಲದೆ, ಪತ್ರಕರ್ತರು ತಮ್ಮ ವೃತ್ತಿಪರ ಜವಾಬ್ದಾರಿಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಎಲ್ಲ ಪತ್ರಕರ್ತರಿಗೂ (ವಯೋಮಿತಿ ಹೇರದೆ) ಲಸಿಕೆ ನೀಡಬೇಕು ಎಂದು ಕೂಟ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪತ್ರಕರ್ತರವನ್ನು ಮುಂಚೂಣಿ ಕೆಲಸಗಾರರು ಎಂದು ಘೋಷಿಸಿ, ಆದ್ಯತೆ ಮೇರೆಗೆ ಕೋವಿಡ್–19ರ ಲಸಿಕೆ ನೀಡಬೇಕು ಎಂದು ಭಾರತೀಯ ಸಂಪಾದಕರ ಕೂಟವು (ಇಜಿಐ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.</p>.<p>ಸಾಂಕ್ರಾಮಿಕ ರೋಗ, ಚುನಾವಣೆ ಮತ್ತು ಇತರ ಪ್ರಚಲಿತ ವಿದ್ಯಮಾನಗಳ ಕುರಿತು ಸುದ್ದಿ ಸಂಸ್ಥೆಗಳು ಬಿಡುವಿಲ್ಲದೆ ಸುದ್ದಿ ಮತ್ತು ಮಾಹಿತಿಯನ್ನು ಓದುಗರಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಸುದ್ದಿ ಮಾಧ್ಯಮವನ್ನು ಅಗತ್ಯ ಸೇವೆಗಳ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಲಸಿಕೆ ನೀಡುವುದರ ಮೂಲಕ ರಕ್ಷಣೆಯ ಹೊದಿಕೆ ನೀಡುವುದು ನ್ಯಾಯೋಚಿತ ಎಂದು ಇಜಿಐ ಪ್ರತಿಪಾದಿಸಿದೆ.</p>.<p>ಲಸಿಕೆಯ ರಕ್ಷಣೆ ಇಲ್ಲದೆ, ಪತ್ರಕರ್ತರು ತಮ್ಮ ವೃತ್ತಿಪರ ಜವಾಬ್ದಾರಿಗಳನ್ನು ನಿರ್ವಹಿಸುವುದು ಕಷ್ಟಕರವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಎಲ್ಲ ಪತ್ರಕರ್ತರಿಗೂ (ವಯೋಮಿತಿ ಹೇರದೆ) ಲಸಿಕೆ ನೀಡಬೇಕು ಎಂದು ಕೂಟ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>