<p><strong>ಚೆನ್ನೈ:</strong> ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆ (ನ.25ರಂದು) ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶದಲ್ಲಿ ‘ನಿವಾರ್‘ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಪರಿಣಾಮ ತಮಿಳುನಾಡು ಮತ್ತು ಪುದುಚೆರಿ, ಕರೈಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.</p>.<p>‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಪ್ರಧಾನಿ ಚರ್ಚೆ: </strong>ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್‘ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆ (ನ.25ರಂದು) ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಪ್ರದೇಶದಲ್ಲಿ ‘ನಿವಾರ್‘ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p>ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಪರಿಣಾಮ ತಮಿಳುನಾಡು ಮತ್ತು ಪುದುಚೆರಿ, ಕರೈಕಲ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.</p>.<p>‘ಮುಂಜಾಗ್ರತಾ ಕ್ರಮವಾಗಿ ಚೆಂಬರಂಬಕ್ಕಂ ಸೇರಿದಂತೆ ಇಲ್ಲಿನ ಜಲಾಶಯಗಳ ಪ್ರದೇಶಗಳಮೇಲೆ ನಿರಂತರವಾಗಿ ನಿಗಾವಹಿಸಲಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಪ್ರಧಾನಿ ಚರ್ಚೆ: </strong>ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ಭಾಗಗಳಿಗೆ ‘ನಿವಾರ್‘ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎರಡು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗ ಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ‘ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಪುದುಚೆರಿಯಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಾದಷ್ಟು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆ. ಪ್ರವಾಹಪೀಡಿತ ಪ್ರದೇಶಗಳಲ್ಲಿರುವ ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>