<p><strong>ನವದೆಹಲಿ: </strong>ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ-ಈಶಾನ್ಯಕ್ಕೆ ಗಂಟೆಗೆ 12 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p>ಅಂಡಮಾನ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್ನಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 110 ಕಿಮೀ ದೂರದಲ್ಲಿರುವ ವಾಯುಭಾರ ಕುಸಿತವು ಸೋಮವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.</p>.<p>‘ಮುಂದಿನ 48 ಗಂಟೆಗಳಲ್ಲಿ ಅಂಡಮಾನ್ ದ್ವೀಪಗಳ ಮೂಲಕ ಮ್ಯಾನ್ಮಾರ್ ಕರಾವಳಿಯ ಕಡೆಗೆ ಇದು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ’ಎಂದು ಇಲಾಖೆಯು ಬೆಳಿಗ್ಗೆ 8:45 ಕ್ಕೆ ಹೊರಡಿಸಿದ ರಾಷ್ಟ್ರೀಯ ಬುಲೆಟಿನ್ನಲ್ಲಿ ತಿಳಿಸಿದೆ.</p>.<p>ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳವರೆಗೆ ಎಲ್ಲಾ ಪ್ರವಾಸೋದ್ಯಮ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.</p>.<p>ಮೀನುಗಾರರಿಗೆ ಆಗ್ನೇಯ ಸಮುದ್ರದ ಕಡೆಗೆ ಹೋಗದಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ-ಈಶಾನ್ಯಕ್ಕೆ ಗಂಟೆಗೆ 12 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p>ಅಂಡಮಾನ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್ನಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 110 ಕಿಮೀ ದೂರದಲ್ಲಿರುವ ವಾಯುಭಾರ ಕುಸಿತವು ಸೋಮವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.</p>.<p>‘ಮುಂದಿನ 48 ಗಂಟೆಗಳಲ್ಲಿ ಅಂಡಮಾನ್ ದ್ವೀಪಗಳ ಮೂಲಕ ಮ್ಯಾನ್ಮಾರ್ ಕರಾವಳಿಯ ಕಡೆಗೆ ಇದು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ’ಎಂದು ಇಲಾಖೆಯು ಬೆಳಿಗ್ಗೆ 8:45 ಕ್ಕೆ ಹೊರಡಿಸಿದ ರಾಷ್ಟ್ರೀಯ ಬುಲೆಟಿನ್ನಲ್ಲಿ ತಿಳಿಸಿದೆ.</p>.<p>ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳವರೆಗೆ ಎಲ್ಲಾ ಪ್ರವಾಸೋದ್ಯಮ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.</p>.<p>ಮೀನುಗಾರರಿಗೆ ಆಗ್ನೇಯ ಸಮುದ್ರದ ಕಡೆಗೆ ಹೋಗದಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>