ಅಂಡಮಾನ್ನಲ್ಲಿ ತೀವ್ರಗೊಂಡ ವಾಯುಭಾರ ಕುಸಿತ: ಚಂಡಮಾರುತದ ಎಚ್ಚರಿಕೆ

ನವದೆಹಲಿ: ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ-ಈಶಾನ್ಯಕ್ಕೆ ಗಂಟೆಗೆ 12 ಕಿಲೋಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಅಂಡಮಾನ್ ದ್ವೀಪಗಳಲ್ಲಿನ ಪೋರ್ಟ್ ಬ್ಲೇರ್ನಿಂದ ಪೂರ್ವ-ಆಗ್ನೇಯಕ್ಕೆ ಸುಮಾರು 110 ಕಿಮೀ ದೂರದಲ್ಲಿರುವ ವಾಯುಭಾರ ಕುಸಿತವು ಸೋಮವಾರ ಸಂಜೆ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.
‘ಮುಂದಿನ 48 ಗಂಟೆಗಳಲ್ಲಿ ಅಂಡಮಾನ್ ದ್ವೀಪಗಳ ಮೂಲಕ ಮ್ಯಾನ್ಮಾರ್ ಕರಾವಳಿಯ ಕಡೆಗೆ ಇದು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ’ಎಂದು ಇಲಾಖೆಯು ಬೆಳಿಗ್ಗೆ 8:45 ಕ್ಕೆ ಹೊರಡಿಸಿದ ರಾಷ್ಟ್ರೀಯ ಬುಲೆಟಿನ್ನಲ್ಲಿ ತಿಳಿಸಿದೆ.
ಸಮುದ್ರದ ಪರಿಸ್ಥಿತಿ ತುಂಬಾ ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳವರೆಗೆ ಎಲ್ಲಾ ಪ್ರವಾಸೋದ್ಯಮ ಮತ್ತು ಮೀನುಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.
ಮೀನುಗಾರರಿಗೆ ಆಗ್ನೇಯ ಸಮುದ್ರದ ಕಡೆಗೆ ಹೋಗದಂತೆ ಸೂಚಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.