ನವದೆಹಲಿ: ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ದೀಪ್ ಸಿಧು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟ ದೀಪ್ ಸಿಧು ಸೇರಿದಂತೆ ನಾಲ್ವರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದವರಿಗೆ ₹1 ಲಕ್ಷ ಹಾಗೂ ಬೂಟಾ ಸಿಂಗ್, ಸುಖ್ದೇವ್ ಸಿಂಗ್ ಮತ್ತು ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ₹50,000 ನಗದು ಪುರಸ್ಕಾರ ಘೋಷಣೆ ಮಾಡಿದ್ದರು.
ಜನವರಿ 26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
Delhi Police have arrested Deep Sidhu, an accused in 26th January violence case.