<p><strong>ನವದೆಹಲಿ:</strong> ಪೂರ್ವ ಉಕ್ರೇನ್ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ, ರಷ್ಯಾ ಮತ್ತು ಉಕ್ರೇನ್ ದೇಶಗಳೆರಡು ಸಂಘರ್ಷದ ಪ್ರದೇಶದಿಂದ ಸುರಕ್ಷಿತವಾಗಿ ಹಿಂತಿರುಗಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಬಲವಾಗಿ ಒತ್ತಾಯಿಸಿದೆ.</p>.<p>'ವಿದ್ಯಾರ್ಥಿಗಳು ಸುರಕ್ಷತೆಯಿಂದಿರಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅನಗತ್ಯ ಅಪಾಯಗಳನ್ನು ತಪ್ಪಿಸಲು ಶೆಲ್ಟರ್ಗಳಲ್ಲಿಯೇ ಉಳಿಯಬೇಕು ಎಂದು ಸಲಹೆ ನೀಡಲಾಗಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.</p>.<p>ಸುಮಾರು 700 ಭಾರತೀಯರು ಸುಮಿ ನಗರದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಶುಕ್ರವಾರ ತಿಳಿಸಿದ್ದರು.</p>.<p>'ಉಕ್ರೇನ್ನ ಸುಮಿ ನಗರದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಾವು ತೀವ್ರ ಕಾಳಜಿ ಹೊಂದಿದ್ದೇವೆ. ನಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ನಿರ್ಮಿಸಲು ರಷ್ಯಾ ಮತ್ತು ಉಕ್ರೇನ್ ಸರ್ಕಾರಗಳನ್ನು ಬಲವಾಗಿ ಒತ್ತಾಯಿಸಿದ್ದೇವೆ' ಎಂದು ಬಾಗ್ಚಿ ಶನಿವಾರ ಟ್ವೀಟ್ ಮಾಡಿದ್ದಾರೆ.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತದ ರಾಯಭಾರ ಕಚೇರಿ ಸುಮಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಉಕ್ರೇನ್ನ ಸುಮಿ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ, ರಷ್ಯಾ ಮತ್ತು ಉಕ್ರೇನ್ ದೇಶಗಳೆರಡು ಸಂಘರ್ಷದ ಪ್ರದೇಶದಿಂದ ಸುರಕ್ಷಿತವಾಗಿ ಹಿಂತಿರುಗಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಬಲವಾಗಿ ಒತ್ತಾಯಿಸಿದೆ.</p>.<p>'ವಿದ್ಯಾರ್ಥಿಗಳು ಸುರಕ್ಷತೆಯಿಂದಿರಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅನಗತ್ಯ ಅಪಾಯಗಳನ್ನು ತಪ್ಪಿಸಲು ಶೆಲ್ಟರ್ಗಳಲ್ಲಿಯೇ ಉಳಿಯಬೇಕು ಎಂದು ಸಲಹೆ ನೀಡಲಾಗಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.</p>.<p>ಸುಮಾರು 700 ಭಾರತೀಯರು ಸುಮಿ ನಗರದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅವರು ಶುಕ್ರವಾರ ತಿಳಿಸಿದ್ದರು.</p>.<p>'ಉಕ್ರೇನ್ನ ಸುಮಿ ನಗರದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ನಾವು ತೀವ್ರ ಕಾಳಜಿ ಹೊಂದಿದ್ದೇವೆ. ನಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಕಾರಿಡಾರ್ ನಿರ್ಮಿಸಲು ರಷ್ಯಾ ಮತ್ತು ಉಕ್ರೇನ್ ಸರ್ಕಾರಗಳನ್ನು ಬಲವಾಗಿ ಒತ್ತಾಯಿಸಿದ್ದೇವೆ' ಎಂದು ಬಾಗ್ಚಿ ಶನಿವಾರ ಟ್ವೀಟ್ ಮಾಡಿದ್ದಾರೆ.</p>.<p>ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತದ ರಾಯಭಾರ ಕಚೇರಿ ಸುಮಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>