<p><strong>ವಿಶ್ವಸಂಸ್ಥೆ:</strong> ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳ ಪ್ರಸರಣ ಮತ್ತು ಅವುಗಳ ವಿತರಣಾ ವ್ಯವಸ್ಥೆಯು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅಪಾಯ ಉಂಟು ಮಾಡುತ್ತವೆ ಎಂದು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಭಯೋತ್ಪಾದಕರಿಗೆ ಅಂತಹ ಶಸ್ತ್ರಾಸ್ತ್ರಗಳು ದೊರೆಯುವ ಸಾಧ್ಯತೆ ಇರುವುದರಿಂದ ಗಂಭೀರ ಅಪಾಯಗಳು ಎದುರಾಗಬಹುದು. ಹೀಗಾಗಿ ಜಾಗತಿಕ ಸಮುದಾಯ ಈ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಭಾರತ ಪ್ರತಿಪಾದಿಸಿದೆ.</p>.<p>ಈ ಬೆದರಿಕೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ಇದಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ಸಮಸ್ಯೆಗಳನ್ನು ಎದುರಿಸುವ ಸಮಿತಿಯ ಸಭೆಯಲ್ಲಿ ಭಾರತದ ರಾಯಭಾರಿ ಪಂಕಜ್ ಶರ್ಮಾ ಹೇಳಿದರು.</p>.<p>ಭಯೋತ್ಪಾದಕರ ಬಳಿ ಅಕ್ರಮವಾಗಿ ಇರುವ ಸಣ್ಣ ಮತ್ತು ಲಘು ಶಸ್ತ್ರಾಸ್ತ್ರಗಳು ಅತ್ಯಂತ ಅಪಾಯಕಾರಿಯಾದದ್ದು ಎಂದು ಅವರು ತಿಳಿಸಿದರು.</p>.<p>ಸಣ್ಣ ಮತ್ತು ಲಘು ಶಸ್ತ್ರಾಸ್ತ್ರಗಳ ಅಕ್ರಮ ವ್ಯಾಪಾರವನ್ನು ತಡೆಯುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಕ್ರಿಯಾ ಯೋಜನೆಯ ಸಂಪೂರ್ಣ ಮತ್ತು ಪರಿಣಾಮಕಾರಿ ಅನುಷ್ಠಾನ ಆಗಬೇಕು ಎಂಬುದನ್ನು ಭಾರತ ಬಯಸುತ್ತದೆ ಎಂದು ಅವರು ಹೇಳಿದರು.</p>.<p>ಈ ನಿಟ್ಟಿನಲ್ಲಿ ಎಲ್ಲ ದೇಶಗಳು ಕಾನೂನುಗಳನ್ನು ರಚಿಸಬೇಕು. ಸಣ್ಣ, ಲಘು ಶಸ್ತ್ರಾಸ್ತ್ರಗಳ ಆಮದು ಮತ್ತು ರಫ್ತುಗಳ ಮೇಲೆ ನಿಯಂತ್ರಣ ಹೊಂದಿರಬೇಕು ಮತ್ತು ದಾಸ್ತಾನು ನಿರ್ವಹಣೆಯನ್ನು ಸುಧಾರಿಸಿಕೊಳ್ಳಬೇಕು. ಈ ಸಂಬಂಧ ಎಲ್ಲ ದೇಶಗಳು ಪರಸ್ಪರ ಸಹಕಾರ ಮತ್ತು ನೆರವು ನೀಡಬೇಕು ಎಂದು ವಿಶ್ವಸಂಸ್ಥೆಯ ನಿಶ್ಯಸ್ತ್ರೀಕರಣ ವ್ಯವಹಾರಗಳ ಕಚೇರಿ ತಿಳಿಸಿದೆ.</p>.<p>ಶಸ್ತ್ರಾಸ್ತ್ರಗಳ ಪತ್ತೆಹಚ್ಚುವಿಕೆ ವ್ಯವಸ್ಥೆಯನ್ನು ಸುಧಾರಿಸುವುದು 2030ರ ಸುಸ್ಥಿರ ಅಭಿವೃದ್ಧಿಯ ಕಾರ್ಯಸೂಚಿಯ ಭಾಗವಾಗಿದೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ಸಾಮೂಹಿಕ ವಿನಾಶದ ಶಸ್ತ್ರಾಸ್ತ್ರಗಳ ಪ್ರಸರಣ ಮತ್ತು ಅವುಗಳ ವಿತರಣಾ ವ್ಯವಸ್ಥೆಯು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅಪಾಯ ಉಂಟು ಮಾಡುತ್ತವೆ ಎಂದು ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ.</p>.<p>ಭಯೋತ್ಪಾದಕರಿಗೆ ಅಂತಹ ಶಸ್ತ್ರಾಸ್ತ್ರಗಳು ದೊರೆಯುವ ಸಾಧ್ಯತೆ ಇರುವುದರಿಂದ ಗಂಭೀರ ಅಪಾಯಗಳು ಎದುರಾಗಬಹುದು. ಹೀಗಾಗಿ ಜಾಗತಿಕ ಸಮುದಾಯ ಈ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಭಾರತ ಪ್ರತಿಪಾದಿಸಿದೆ.</p>.<p>ಈ ಬೆದರಿಕೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ಇದಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನದಲ್ಲಿ ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ಸಮಸ್ಯೆಗಳನ್ನು ಎದುರಿಸುವ ಸಮಿತಿಯ ಸಭೆಯಲ್ಲಿ ಭಾರತದ ರಾಯಭಾರಿ ಪಂಕಜ್ ಶರ್ಮಾ ಹೇಳಿದರು.</p>.<p>ಭಯೋತ್ಪಾದಕರ ಬಳಿ ಅಕ್ರಮವಾಗಿ ಇರುವ ಸಣ್ಣ ಮತ್ತು ಲಘು ಶಸ್ತ್ರಾಸ್ತ್ರಗಳು ಅತ್ಯಂತ ಅಪಾಯಕಾರಿಯಾದದ್ದು ಎಂದು ಅವರು ತಿಳಿಸಿದರು.</p>.<p>ಸಣ್ಣ ಮತ್ತು ಲಘು ಶಸ್ತ್ರಾಸ್ತ್ರಗಳ ಅಕ್ರಮ ವ್ಯಾಪಾರವನ್ನು ತಡೆಯುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಕ್ರಿಯಾ ಯೋಜನೆಯ ಸಂಪೂರ್ಣ ಮತ್ತು ಪರಿಣಾಮಕಾರಿ ಅನುಷ್ಠಾನ ಆಗಬೇಕು ಎಂಬುದನ್ನು ಭಾರತ ಬಯಸುತ್ತದೆ ಎಂದು ಅವರು ಹೇಳಿದರು.</p>.<p>ಈ ನಿಟ್ಟಿನಲ್ಲಿ ಎಲ್ಲ ದೇಶಗಳು ಕಾನೂನುಗಳನ್ನು ರಚಿಸಬೇಕು. ಸಣ್ಣ, ಲಘು ಶಸ್ತ್ರಾಸ್ತ್ರಗಳ ಆಮದು ಮತ್ತು ರಫ್ತುಗಳ ಮೇಲೆ ನಿಯಂತ್ರಣ ಹೊಂದಿರಬೇಕು ಮತ್ತು ದಾಸ್ತಾನು ನಿರ್ವಹಣೆಯನ್ನು ಸುಧಾರಿಸಿಕೊಳ್ಳಬೇಕು. ಈ ಸಂಬಂಧ ಎಲ್ಲ ದೇಶಗಳು ಪರಸ್ಪರ ಸಹಕಾರ ಮತ್ತು ನೆರವು ನೀಡಬೇಕು ಎಂದು ವಿಶ್ವಸಂಸ್ಥೆಯ ನಿಶ್ಯಸ್ತ್ರೀಕರಣ ವ್ಯವಹಾರಗಳ ಕಚೇರಿ ತಿಳಿಸಿದೆ.</p>.<p>ಶಸ್ತ್ರಾಸ್ತ್ರಗಳ ಪತ್ತೆಹಚ್ಚುವಿಕೆ ವ್ಯವಸ್ಥೆಯನ್ನು ಸುಧಾರಿಸುವುದು 2030ರ ಸುಸ್ಥಿರ ಅಭಿವೃದ್ಧಿಯ ಕಾರ್ಯಸೂಚಿಯ ಭಾಗವಾಗಿದೆ ಎಂದು ಅದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>