ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸೋಲಿಸಿ ನೋಡೋಣ: ಬಿಜೆಪಿಗೆ ಉದ್ಧವ್ ಠಾಕ್ರೆ ಸವಾಲು

Last Updated 22 ಸೆಪ್ಟೆಂಬರ್ 2022, 5:43 IST
ಅಕ್ಷರ ಗಾತ್ರ

ಮುಂಬೈ: ಮುಂಬೈನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ತಾಕತ್ತಿದ್ದರೆ ಬಿಜೆಪಿ ಶಿವಸೇನಾವನ್ನು ಸೋಲಿಸಲು ಧೈರ್ಯ ಮಾಡಲಿ ಎಂದು ಶಿವಸೇನಾದ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಬುಧವಾರ ಸವಾಲು ಹಾಕಿದ್ದಾರೆ.

ಇಲ್ಲಿನ ಗುರುಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮುಂಬೈನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನಾಕ್ಕೆ ತನ್ನ ಸ್ಥಾನವನ್ನು ತೋರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪಕ್ಷಕ್ಕೆ ಸೂಚಿಸಿದ್ದಾರೆ. ಮುಂಬೈ ನಗರದೊಂದಿಗೆ ಇರುವ ಶಿವಸೇನಾದ ಸಂಬಂಧವನ್ನು ಮುರಿಯಲಾಗದು. ನಮ್ಮ ಪಕ್ಷವು ಇಂದಿಗೂ ಇಲ್ಲಿನ ಜನರೊಂದಿಗೆ ಗಾಢ ಸಂಪರ್ಕವನ್ನು ಹೊಂದಿದೆ. ಸಾಮಾನ್ಯ ಮುಂಬೈ ನಿವಾಸಿಗೂ ಅಗತ್ಯವಿದ್ದಾಗ ಸಹಾಯಕ್ಕಿದ್ದೇವೆ. ನಿಮಗೆ ಧೈರ್ಯವಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಿ’ ಎಂದು ಅವರು ಸವಾಲು ಎಸೆದಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಂಡಾಯದ ಬಗ್ಗೆಯೂ ವಾಗ್ದಾಳಿ ನಡೆಸಿದ ಠಾಕ್ರೆ, ಗುಜರಾತ್‌ಗೆ ವರ್ಗಾವಣೆಗೊಂಡಿರುವ ₹ 1.54 ಲಕ್ಷ ಕೋಟಿವೇದಾಂತ-ಫಾಕ್ಸ್‌ಕಾನ್ ಸೆಮಿಕಂಡಕ್ಟರ್ ಯೋಜನೆಯಲ್ಲಿ ಬಿಜೆಪಿಯು ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT