ಊಟಿ ಸಮೀಪದ ವೆಲ್ಲಿಂಗ್ಟನ್ನಲ್ಲಿರುವ ಡಿಫೆನ್ಸ್ ಸರ್ವೀಸ್ ಸ್ಟಾಫ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಗ್, ʼನಮ್ಮ ನೆರೆಹೊರೆಯಲ್ಲಿರುವ ರಾಷ್ಟ್ರಗಳಲ್ಲಿ ಒಂದು ದೇಶ (ಪಾಕಿಸ್ತಾನ), ಎರಡು ಯುದ್ಧಗಳಲ್ಲಿ ನಮ್ಮಿಂದ ಸೋಲು ಅನುಭವಿಸಿದ ಬಳಿಕ ಛಾಯಾ ಸಮರವನ್ನು ಆರಂಭಿಸಿದೆ. ಭಯೋತ್ಪಾದನೆಯುಅದರ ರಾಜ್ಯ ನೀತಿಯ ಅವಿಭಾಜ್ಯ ಅಂಗವಾಗಿದೆ. ಅದು (ಪಾಕ್) ಉಗ್ರರಿಗೆಧನಸಹಾಯ, ಶಸ್ತ್ರಾಸ್ತ್ರ, ತರಬೇತಿ ಒದಗಿಸುವ ಮೂಲಕ ಭಾರತವನ್ನು ಗುರಿಯಾಗಿಸಿದೆʼಎಂದು ಪರೋಕ್ಷವಾಗಿವಾಗ್ದಾಳಿ ನಡೆಸಿದ್ದಾರೆ.