ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಮ್ಮುವಿಗೆ ರಾಜನಾಥ್ ಸಿಂಗ್

Last Updated 24 ಜುಲೈ 2022, 4:17 IST
ಅಕ್ಷರ ಗಾತ್ರ

ನವದೆಹಲಿ: ಕಾರ್ಗಿಲ್‌ ವಿಜಯ ದಿವಸದ ಪ್ರಯುಕ್ತ ನಡೆಯಲಿರುವ ಸಮಾರಂಭದಲ್ಲಿ ಭಾಗವಹಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರುಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಭೇಟಿ ನೀಡಲಿದ್ದಾರೆ.

'ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಳೆ, ಜುಲೈ 24ರಂದುಜಮ್ಮುವಿಗೆ ಭೇಟಿ ನೀಡಲಿದ್ದೇನೆ' ಎಂದು ಅವರು ಶನಿವಾರ ಟ್ವೀಟ್ ಮಾಡಿದ್ದರು.

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಆಗಮಿಸಲಿರುವಸಿಂಗ್, ಜಮ್ಮು ವಿಶ್ವವಿದ್ಯಾಲಯದ ಬಳಿ ಇರುವ ಗುಲ್ಶಾನ್‌ ಮೈದಾನದಲ್ಲಿ ನಡೆಯುವ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಗೆಲುವು ಸಾಧಿಸಿದ ನೆನಪಿಗಾಗಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತದೆ.

ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ನಡೆಯುವ ಮೂರು ದಿನಗಳ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಸೇನೆ, ನಾಗರಿಕ ಆಡಳಿತದ ಗಣ್ಯರು, ಶೌರ್ಯ ಪ್ರಶಸ್ತಿ ಪುರಸ್ಕೃತರುಹಾಗೂ ಅವರ ಕುಟುಂಬದವರು ಭಾಗವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಭಾರತೀಯ ಸೇನೆಯೂ ಸಿದ್ಧತೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT