ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಆನಂದ್ ಶರ್ಮಾ ಮಾತನಾಡಿ, 'ಈ ಪ್ರಜಾಪ್ರಭುತ್ವದಲ್ಲಿ ಸರ್ಕಾರವು ಉದ್ದೇಶಪೂರ್ವಕವಾಗಿ ವಿಪಕ್ಷಗಳ ಧ್ವನಿಯನ್ನು ಮೊಟಕುಗೊಳಿಸುತ್ತಿದೆ. ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಎತ್ತುವ ಮೂಲಕ ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ವಿಪಕ್ಷಗಳು ಬಯಸುತ್ತವೆ. ಆದರೆ ಸರ್ಕಾರದ ಈ ನಡೆಯಿಂದ ಈ ಪರಿಸ್ಥಿತಿ ಎದುರಾಗಿದೆ. ಈ ಚಳಿಗಾಲದ ಅಧಿವೇಶನವನ್ನು ಎಂದಿಗೂ ಮರೆಯುವಂತಿಲ್ಲ' ಎಂದಿದ್ದಾರೆ.