ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ದೆಹಲಿಯ ಪಶ್ಚಿಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿದ್ದ 12 ವರ್ಷದ ಬಾಲಕಿಯು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
'ಬಾಲಕಿಯ ದೇಹದ ಮೇಲೆ ಗಾಯಗಳಾಗಿದ್ದು, ಖಾಸಗಿ ಭಾಗಗಳಿಂದ ರಕ್ತಸ್ರಾವವಾಗುತ್ತಿತ್ತು. ಇಡೀ ದೇಹವು ರಕ್ತದಿಂದ ತೊಯ್ದಿತ್ತು. ಆಕೆಯನ್ನು ಮೊದಲು ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ನಂತರ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕಿಯ ತಲೆ ಮತ್ತು ದೇಹದ ಹಿಂಬಾಗಗಳಿಗೆ ತೀಕ್ಷ್ಣ ಆಯುಧದಿಂದ ಹಲವು ಬಾರಿ ಹೊಡೆಯಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಂತ್ರಸ್ತೆಯನ್ನು ಕಾಣಲು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ಇದೊಂದು ಅನಾಗರಿಕ ಅಪರಾಧವಾಗಿದೆ. ನಾನು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ. ಅವರು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ. ಆಕೆಯ ಕುಟುಂಬ ಸದಸ್ಯರಿಗೆ ₹10 ಲಕ್ಷ ಪರಿಹಾರ ನೀಡಲಾಗುತ್ತದೆ' ಎಂದು ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡುವ ಮೊದಲು ಟ್ವೀಟ್ ಮಾಡಿರುವ ಕೇಜ್ರಿವಾಲ್, 'ಈ ಘಟನೆ ನನ್ನನ್ನು ಆಳವಾಗಿ ಕಲುಕಿದೆ. ಮುಕ್ತವಾಗಿ ತಿರುಗಾಡುವ ಅತ್ಯಾಚಾರಿಗಳಂತಹ ಕ್ರೂರಿಗಳನ್ನು ಸಹಿಸಲಾಗದು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
I have spoken to the Police Commissioner. Police are trying to nab the accused. The govt will ensure strict punishment for the accused. The govt will provide Rs 10 lakhs to her family members: Delhi CM Arvind Kejriwal on sexual assault of a 12-year-old girl in Pashchim Vihar area pic.twitter.com/rMtq2vx3pT