<p><strong>ಹೊಸದಿಲ್ಲಿ:</strong> ದೆಹಲಿ ವಿಧಾನಸಭೆ ಅಧಿವೇಶನವು ಇಂದಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.</p>.<p>7ನೇ ಅಧಿವೇಶನವು ಇಂದು ಬೆಳಗ್ಗೆ 11ರಿಂದ ಪ್ರಾರಂಭವಾಗಿ ಜನವರಿ18ರ ವರೆಗೆ ಮುಂದುವರೆಯಲಿದೆ. ಅಗತ್ಯಬಿದ್ದರೆ ಸದನದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖಾಮುಖಿಯಾದ ನಂತರ ಮೊದಲ ಬಾರಿಗೆ ಅಧಿವೇಶನವನ್ನು ನಡೆಸಲಾಗುತ್ತಿದೆ.</p>.<p>ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ 107 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ ಆತ್ಮ ವಿಶ್ವಾಸವನ್ನು ಬಿಜೆಪಿ ಕೆಲ ನಾಯಕರು ವ್ಯಕ್ತಪಡಿಸಿದ್ದರು. </p>.<p>ಪಾಲಿಕೆ ಚುನಾವಣೆಯ ಕಚ್ಚಾಟದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. </p>.<p> ಇದನ್ನು ಓದಿ: <a href="https://www.prajavani.net/india-news/6-grand-entrance-gates-to-come-up-in-ayodhya-1006638.html" itemprop="url">ಅಯೋಧ್ಯೆಯಲ್ಲಿ 6 ಬೃಹತ್ ಪ್ರವೇಶ ದ್ವಾರ ನಿರ್ಮಾಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದಿಲ್ಲಿ:</strong> ದೆಹಲಿ ವಿಧಾನಸಭೆ ಅಧಿವೇಶನವು ಇಂದಿನಿಂದ ಪ್ರಾರಂಭವಾಗಲಿದೆ. ಇತ್ತೀಚೆಗೆ ನಡೆದ ಮೇಯರ್ ಚುನಾವಣೆಯ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.</p>.<p>7ನೇ ಅಧಿವೇಶನವು ಇಂದು ಬೆಳಗ್ಗೆ 11ರಿಂದ ಪ್ರಾರಂಭವಾಗಿ ಜನವರಿ18ರ ವರೆಗೆ ಮುಂದುವರೆಯಲಿದೆ. ಅಗತ್ಯಬಿದ್ದರೆ ಸದನದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p>ದೆಹಲಿಯ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಖಾಮುಖಿಯಾದ ನಂತರ ಮೊದಲ ಬಾರಿಗೆ ಅಧಿವೇಶನವನ್ನು ನಡೆಸಲಾಗುತ್ತಿದೆ.</p>.<p>ಡಿ.7ರಂದು ನಡೆದ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿಪಕ್ಷ 107 ಸ್ಥಾನ ಗೆದ್ದಿತ್ತು. ಬಿಜೆಪಿ 104 ಸ್ಥಾನದಲ್ಲಿ ಜಯ ಗಳಿಸಿತ್ತು. ಎಎಪಿ ಗೆಲುವಿನ ಹೊರತಾಗಿಯೂ ತಮ್ಮ ಪಕ್ಷದವರೇ ಮೇಯರ್ ಆಗಲಿದ್ದಾರೆ ಎಂಬ ಆತ್ಮ ವಿಶ್ವಾಸವನ್ನು ಬಿಜೆಪಿ ಕೆಲ ನಾಯಕರು ವ್ಯಕ್ತಪಡಿಸಿದ್ದರು. </p>.<p>ಪಾಲಿಕೆ ಚುನಾವಣೆಯ ಕಚ್ಚಾಟದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. </p>.<p> ಇದನ್ನು ಓದಿ: <a href="https://www.prajavani.net/india-news/6-grand-entrance-gates-to-come-up-in-ayodhya-1006638.html" itemprop="url">ಅಯೋಧ್ಯೆಯಲ್ಲಿ 6 ಬೃಹತ್ ಪ್ರವೇಶ ದ್ವಾರ ನಿರ್ಮಾಣ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>