ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಖ್‌ ಜನಾಂಗದ ವ್ಯಕ್ತಿ ಮೇಲೆ ಹಲ್ಲೆ: ಅಲ್ಪಸಂಖ್ಯಾತ ಆಯೋಗಕ್ಕೆ ಬಿಜೆಪಿ ದೂರು

ಬಲವಂತವಾಗಿ ಪೇಟ ತೆಗೆಸಿದ ಆರೋಪ
Last Updated 11 ಅಕ್ಟೋಬರ್ 2020, 13:00 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಬಿಜೆಪಿ ರ‍್ಯಾಲಿಯಲ್ಲಿ ಸಿಖ್ ಸಮುದಾಯದ ಬಲ್ವಿಂದರ್ ಸಿಂಗ್ ಅವರ ಮೇಲೆ ನಡೆದ ಹಲ್ಲೆ ನಡೆಸಿರುವ ಪೊಲೀಸರು ಅವರ ಪೇಟವನ್ನು (ಟರ್ಬನ್‌) ಬಲವಂತವಾಗಿ ತೆಗೆಸಿದ್ದಾರೆ ಎಂದು ಆರೋಪಿಸಿ, ದೆಹಲಿಯ ಬಿಜೆಪಿ ವಕ್ತಾರ ತಾಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ನೀಡಿದ ದೂರನ್ನು ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಪರಿಗಣಿಸಿದೆ.

ಹೌರಾದಲ್ಲಿ ಗುರುವಾರ ನಡೆದ ಬಿಜೆಪಿ ರ‍್ಯಾಲಿಯಲ್ಲಿ ಭದ್ರತಾ ಅಧಿಕಾರಿ ಬಲ್ವಿಂದರ್ ಸಿಂಗ್ ಪಾಲ್ಗೊಂಡಿದ್ದರು. ಆ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಬಿಜೆಪಿ ದೂರಿದೆ. ಆದರೆ, ಬಲ್ವಿಂದರ್ ತಮ್ಮ ಕೈಯಲ್ಲಿ ಮಾರಕಾಸ್ತ್ರ ಹೊಂದಿದ್ದರು. ಆ ಸಮಯದಲ್ಲಿ ಉಂಟಾದ ಘರ್ಷಣೆಯಲ್ಲಿ ಅವರ ಪೇಟ ಬಿದ್ದಿದೆ ಎಂದು ಪೊಲೀಸರು ವಿವರಣೆ ನೀಡಿದ್ದರು.

ಈ ಸಂಬಂಧ ಬಿಜೆಪಿಯ ವಕ್ತಾರ ತಾಜಿಂದರ್ ಅವರು ಭಾನುವಾರ, ಅಲ್ಪಸಂಖ್ಯಾತ ಆಯೋಗದ ಸದಸ್ಯ ಅತಿಫ್ ರಶೀದ್ ಅವರಿಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

‘ಬಂಗಾಳದಲ್ಲಿ ಆಗಿರುವುದು ಕ್ಷಮಿಸಲಾಗದ್ದು. ಭದ್ರತಾ ಅಧಿಕಾರಿ ಬಲ್ವಿಂದ್ ಸಿಂಗ್ ಅವರ ಮೇಲೆ ನಡೆದ ಕ್ರೂರ ದಾಳಿ ಮತ್ತು ಪಶ್ಚಿಮ ಬಂಗಾಳ ಪೊಲೀಸರು ಅವರ ಪೇಟಕ್ಕೆ ತೋರಿರುವ ಅಗೌರವ ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಈ ಬಗ್ಗೆ ಸಂಬಂಧಿಸಿದ ಪೊಲೀಸ್ ಅಧಿಕಾರಗಳ ವಿರುದ್ಧ ಶೀಘ್ರವೇ ಕ್ರಮ ತೆಗೆದುಕೊಳ್ಳಬೇಕು’ ಎಂದೂ ‌ತಾಜಿಂದರ್ ಪತ್ರದಲ್ಲಿ ಬರೆದಿದ್ದಾರೆ.

‘ಅಲ್ಪಸಂಖ್ಯಾತ ಆಯೋಗದ ಸದಸ್ಯನಾಗಿ ನಾನು ತಕ್ಷಣವೇ ನಿಮ್ಮ ದೂರನ್ನು ಅರಿತುಕೊಂಡಿದ್ದೇನೆ. ನಾಳೆಯ ಹೊತ್ತಿಗೆ ಆಯೋಗವು ಈ ಸಂಬಂಧ ಕ್ರಮ ಕೈಗೊಳ್ಳಲಿದೆ’ ಎಂದು ಅತಿಫ್ ಟ್ವೀಟ್ ಮಾಡಿದ್ದಾರೆ.

ಬಲ್ವಿಂದರ್ ಸಿಂಗ್ ಅವರು ಭಾರತೀಯ ಸೇನೆಯ ಮಾಜಿ ಸೈನಿಕರಾಗಿದ್ದು, ಪ್ರಸ್ತುತ ಬಿಜೆಪಿಯ ನಾಯಕರಿಗೊಬ್ಬರಿಗೆ ಭದ್ರತಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT