ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ ಧರಿಸಿದ್ದ ಇಬ್ಬರು ವ್ಯಕ್ತಿಗಳು ಕಚೇರಿಯೊಳಗೆ ನುಗ್ಗಿದ್ದು, ಮಟಿಯಾಲ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಮೇಲೆ ನಾಲ್ಕೈದು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.