‘ಲೆಫ್ಟಿನೆಂಟ್ ಗವರ್ನರ್ ವಿರುದ್ಧ ನಿಂದನೆಯ ಭಾಷೆ ಬಳಸಲಾಗಿದೆ. ಅವರಿಗೆ ಕಳುಹಿಸಿದ ಕಡತಗಳಿಗೆ ಮುಖ್ಯಮಂತ್ರಿಯೂ ಸಹಿ ಹಾಕಿಲ್ಲ. ಸಂಪುಟ ಸಭೆಯ ನಂತರ ಅವರಿಗೆ ಸಂಪುಟ ಟಿಪ್ಪಣಿಗಳನ್ನು ಕಳುಹಿಸಲಾಗುತ್ತಿದೆ. ಈ ಎಲ್ಲ ಕಾನೂನುಬಾಹಿರ ಚಟುವಟಿಕೆಗಳನ್ನು ಪರಿಗಣಿಸಿ ಸರ್ಕಾರವನ್ನು ತಕ್ಷಣವೇ ವಜಾಗೊಳಿಸಬೇಕು’ ಎಂದು ಅವರು ಹೇಳಿದ್ದಾರೆ.
ಭ್ರಷ್ಟಾಚಾರ ಆರೋಪದಲ್ಲಿ ಸಚಿವ ಸತ್ಯೇಂದರ್ ಜೈನ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಕಳೆದ ಕೆಲವು ದಿನಗಳಿಂದ ಆಗ್ರಹಿಸುತ್ತಿದೆ.
ಈ ಮಧ್ಯೆ, ತಮ್ಮ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಎಎಪಿ ನಾಯಕರು ಆರೋಪಿಸಿದ್ದಾರೆ.