<p><strong>ನವದೆಹಲಿ:</strong> ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಪ್ರವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ಸೋಮವಾರ ಸಂಸತ್ತಿನಲ್ಲಿ ಮದ್ಯವನ್ನು ಪ್ರದರ್ಶಿಸಿರುವುದನ್ನು ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ ಸಂಸದರು, ದೆಹಲಿ ಸರ್ಕಾರವು ಮದ್ಯ ಸೇವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/vhp-to-take-up-shrikrishna-janmabhoomi-in-2024-890352.html" itemprop="url">2024ರಲ್ಲಿ ಶ್ರೀಕೃಷ್ಣ ಜನ್ಮಭೂಮಿಗಾಗಿ ಹೋರಾಟ: ವಿಎಚ್ಪಿ </a></p>.<p>'ಕೋವಿಡ್ನಿಂದಾಗಿ 25,000 ಮಂದಿ ಮೃತಪಟ್ಟಿದ್ದಾರೆ. ಆದರೆ ದೆಹಲಿಯ ಸರ್ಕಾರವು ಮದ್ಯದ ಬಳಕೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಹೊಸ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ನಿರತವಾಗಿದೆ' ಎಂದು ಎಎನ್ಐಗೆ ಪ್ರತಿಕ್ರಿಯಿಸಿದರು.</p>.<p>'ಇಂದು 824 ಹೊಸ ಮದ್ಯದ ಅಂಗಡಿಗಳನ್ನು ತೆರೆಯಲಾಗಿದೆ. ಜನವಸತಿ ಪ್ರದೇಶ, ಕಾಲನಿ, ಗ್ರಾಮಗಳಲ್ಲಿ ಮಂದ್ಯದ ಅಂಗಡಿಗಳನ್ನು ತೆರೆಯಲಾಗುತ್ತಿದೆ. ಮುಂಜಾನೆ 3 ಗಂಟೆಯ ವರೆಗೆ ಮದ್ಯದ ಅಂಗಡಿ ತೆರೆದಿರುತ್ತದೆ. ಬಾರ್ನಲ್ಲಿ ಮಹಿಳೆಯರು ಮುಂಜಾನೆ 3 ಗಂಟೆಯ ವರೆಗೆ ಮದ್ಯಪಾನ ಮಾಡಿದರೆ ರಿಯಾಯಿತಿ ನೀಡಲಾಗುತ್ತದೆ. ಮದ್ಯ ಸೇವನೆಯ ಪ್ರಾಯ ಮಿತಿಯನ್ನು 25ರಿಂದ 21ಕ್ಕೆ ಇಳಿಸಲಾಗಿದೆ' ಎಂದು ಆರೋಪಿಸಿದರು.</p>.<p>ಮುಖ್ಯಮಂತ್ರಿಗಳು ತಮ್ಮ ಪ್ರಚಾರಕ್ಕಾಗಿ ಗರಿಷ್ಠ ಆದಾಯ ಗಳಿಸುವುದು ಇದರ ಹಿಂದಿನ ಉದ್ದೇಶವಾಗಿದೆ. 2022ರ ವಿಧಾನಸಬೆ ಚುನಾವಣಾ ಪ್ರಚಾರಕ್ಕಾಗಿ ಪಂಜಾಬ್ಗೆ ತೆರಳಿರುವ ಕೇಜ್ರಿವಾಲ್, ಮದ್ಯಸೇವನೆಯ ವಿರುದ್ಧ ಭಾಷಣ ಮಾಡುತ್ತಾರೆ. ಇನ್ನೊಂದೆಡೆ ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ಸೇವನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದುಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಪ್ರವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ಸೋಮವಾರ ಸಂಸತ್ತಿನಲ್ಲಿ ಮದ್ಯವನ್ನು ಪ್ರದರ್ಶಿಸಿರುವುದನ್ನು ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.</p>.<p>ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ ಸಂಸದರು, ದೆಹಲಿ ಸರ್ಕಾರವು ಮದ್ಯ ಸೇವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/vhp-to-take-up-shrikrishna-janmabhoomi-in-2024-890352.html" itemprop="url">2024ರಲ್ಲಿ ಶ್ರೀಕೃಷ್ಣ ಜನ್ಮಭೂಮಿಗಾಗಿ ಹೋರಾಟ: ವಿಎಚ್ಪಿ </a></p>.<p>'ಕೋವಿಡ್ನಿಂದಾಗಿ 25,000 ಮಂದಿ ಮೃತಪಟ್ಟಿದ್ದಾರೆ. ಆದರೆ ದೆಹಲಿಯ ಸರ್ಕಾರವು ಮದ್ಯದ ಬಳಕೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಹೊಸ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ನಿರತವಾಗಿದೆ' ಎಂದು ಎಎನ್ಐಗೆ ಪ್ರತಿಕ್ರಿಯಿಸಿದರು.</p>.<p>'ಇಂದು 824 ಹೊಸ ಮದ್ಯದ ಅಂಗಡಿಗಳನ್ನು ತೆರೆಯಲಾಗಿದೆ. ಜನವಸತಿ ಪ್ರದೇಶ, ಕಾಲನಿ, ಗ್ರಾಮಗಳಲ್ಲಿ ಮಂದ್ಯದ ಅಂಗಡಿಗಳನ್ನು ತೆರೆಯಲಾಗುತ್ತಿದೆ. ಮುಂಜಾನೆ 3 ಗಂಟೆಯ ವರೆಗೆ ಮದ್ಯದ ಅಂಗಡಿ ತೆರೆದಿರುತ್ತದೆ. ಬಾರ್ನಲ್ಲಿ ಮಹಿಳೆಯರು ಮುಂಜಾನೆ 3 ಗಂಟೆಯ ವರೆಗೆ ಮದ್ಯಪಾನ ಮಾಡಿದರೆ ರಿಯಾಯಿತಿ ನೀಡಲಾಗುತ್ತದೆ. ಮದ್ಯ ಸೇವನೆಯ ಪ್ರಾಯ ಮಿತಿಯನ್ನು 25ರಿಂದ 21ಕ್ಕೆ ಇಳಿಸಲಾಗಿದೆ' ಎಂದು ಆರೋಪಿಸಿದರು.</p>.<p>ಮುಖ್ಯಮಂತ್ರಿಗಳು ತಮ್ಮ ಪ್ರಚಾರಕ್ಕಾಗಿ ಗರಿಷ್ಠ ಆದಾಯ ಗಳಿಸುವುದು ಇದರ ಹಿಂದಿನ ಉದ್ದೇಶವಾಗಿದೆ. 2022ರ ವಿಧಾನಸಬೆ ಚುನಾವಣಾ ಪ್ರಚಾರಕ್ಕಾಗಿ ಪಂಜಾಬ್ಗೆ ತೆರಳಿರುವ ಕೇಜ್ರಿವಾಲ್, ಮದ್ಯಸೇವನೆಯ ವಿರುದ್ಧ ಭಾಷಣ ಮಾಡುತ್ತಾರೆ. ಇನ್ನೊಂದೆಡೆ ರಾಷ್ಟ್ರ ರಾಜಧಾನಿಯಲ್ಲಿ ಮದ್ಯದ ಸೇವನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದುಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>