ತನಿಖೆ ಪ್ರಗತಿಯತ್ತಿದ್ದು, ಘಟನಾ ಸ್ಥಳದಿಂದ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಭಾರತ ಹಾಗೂ ಇಸ್ರೇಲ್ ಅಧಿಕಾರಿಗಳ ನಡುವೆ ಸಂಪೂರ್ಣ ಸಹಯೋಗವಿದೆ. ಈಗಿನ ಅಂದಾಜಿನ ಪ್ರಕಾರ ಇಸ್ರೇಲ್ ರಾಯಭಾರ ಕಚೇರಿಯನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿರಬಹುದು ಎಂಬ ಬಲವಾದ ಶಂಕೆಯಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ ಎಂದು ರಾನ್ ಮಾಲ್ಕಾ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದರು.