ಈ ಮೊದಲು ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದ್ದವು. ಪೊಲೀಸರು ಅನುಮತಿ ನಿರಾಕರಿಸಿದ್ದರು. ದೆಹಲಿ ಪ್ರವೇಶಿಸುವ ರೈತರನ್ನು ವಶಕ್ಕೆ ಪಡೆದು, ಆರು ಕ್ರೀಡಾಂಗಣಗಳಲ್ಲಿ ಬಂಧನದಲ್ಲಿ ಇರಿಸಲು ಪೊಲೀಸರು ದೆಹಲಿ ಸರ್ಕಾರದ ಅನುಮತಿ ಕೇಳಿದ್ದರು. ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಅನುಮತಿ ನಿರಾಕರಿಸಿತ್ತು.