ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರದ ಹೊಸ ಕೊರೊನಾ ವೈರಸ್ ದೇಶದಲ್ಲಿ 3ನೇ ಅಲೆ ಎಬ್ಬಿಸಬಹುದು–ಕೇಜ್ರಿವಾಲ್

ಮಕ್ಕಳ ಮೇಲೆ ಪರಿಣಾಮ
Last Updated 18 ಮೇ 2021, 11:04 IST
ಅಕ್ಷರ ಗಾತ್ರ

ನವದೆಹಲಿ: ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ಹೊಸ ಮಾದರಿಯು ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಅಲ್ಲಿಂದ ಎಲ್ಲ ರೀತಿಯ ವಿಮಾನ ಸೇವೆಗಳನ್ನು ಕೂಡಲೇ ರದ್ದುಪಡಿಸುವಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಹೊಸ ವೈರಸ್‌ ಮಾದರಿಯು ಭಾರತದಲ್ಲಿ ಮೂರನೇ ಅಲೆಯ ರೂಪದಲ್ಲಿ ವ್ಯಾಪಿಸಬಹುದಾಗಿದೆ ಎಂದು ಕೇಜ್ರಿವಾಲ್‌ ಟ್ವೀಟಿಸಿದ್ದಾರೆ.

'ಸಿಂಗಪುರದಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೊನಾ ವೈರಸ್‌ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ. ಅದು ಮೂರನೇ ಅಲೆಯ ರೂಪದಲ್ಲಿ ದೆಹಲಿಯನ್ನು ಪ್ರವೇಶಿಸಬಹುದಾಗಿದೆ. ಕೇಂದ್ರ ಸರ್ಕಾರವನ್ನು ಕೇಳುವುದೇನೆಂದರೆ: 1. ಸಿಂಗಪುರದ ಜೊತೆಗಿನ ಎಲ್ಲ ವಿಮಾನ ಸೇವೆಗಳನ್ನು ಕೂಡಲೇ ರದ್ದುಪಡಿಸಿ. 2. ಮಕ್ಕಳಿಗೆ ಪರ್ಯಾಯವಾಗಿ ನೀಡಬಹುದಾದ ಲಸಿಕೆಗೆ ಸಂಬಂಧಿಸಿದ ಕಾರ್ಯವನ್ನು ಆದ್ಯತೆಯಾಗಿ ಪರಿಗಣಿಸಿ' ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಮಂಗಳವಾರ 24 ಗಂಟೆಗಳ ಅಂತರದಲ್ಲಿ ದೆಹಲಿಯಲ್ಲಿ ಕೋವಿಡ್‌–19 ದೃಢಪಟ್ಟ 4,482 ಪ್ರಕರಣಗಳು ದಾಖಲಾಗಿವೆ ಹಾಗೂ 265 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT