ನವದೆಹಲಿ: ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ಮಾದರಿಯು ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದ್ದು, ಅಲ್ಲಿಂದ ಎಲ್ಲ ರೀತಿಯ ವಿಮಾನ ಸೇವೆಗಳನ್ನು ಕೂಡಲೇ ರದ್ದುಪಡಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಹೊಸ ವೈರಸ್ ಮಾದರಿಯು ಭಾರತದಲ್ಲಿ ಮೂರನೇ ಅಲೆಯ ರೂಪದಲ್ಲಿ ವ್ಯಾಪಿಸಬಹುದಾಗಿದೆ ಎಂದು ಕೇಜ್ರಿವಾಲ್ ಟ್ವೀಟಿಸಿದ್ದಾರೆ.
'ಸಿಂಗಪುರದಲ್ಲಿ ಪತ್ತೆಯಾಗಿರುವ ಹೊಸ ಸ್ವರೂಪದ ಕೊರೊನಾ ವೈರಸ್ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ. ಅದು ಮೂರನೇ ಅಲೆಯ ರೂಪದಲ್ಲಿ ದೆಹಲಿಯನ್ನು ಪ್ರವೇಶಿಸಬಹುದಾಗಿದೆ. ಕೇಂದ್ರ ಸರ್ಕಾರವನ್ನು ಕೇಳುವುದೇನೆಂದರೆ: 1. ಸಿಂಗಪುರದ ಜೊತೆಗಿನ ಎಲ್ಲ ವಿಮಾನ ಸೇವೆಗಳನ್ನು ಕೂಡಲೇ ರದ್ದುಪಡಿಸಿ. 2. ಮಕ್ಕಳಿಗೆ ಪರ್ಯಾಯವಾಗಿ ನೀಡಬಹುದಾದ ಲಸಿಕೆಗೆ ಸಂಬಂಧಿಸಿದ ಕಾರ್ಯವನ್ನು ಆದ್ಯತೆಯಾಗಿ ಪರಿಗಣಿಸಿ' ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
सिंगापुर में आया कोरोना का नया रूप बच्चों के लिए बेहद ख़तरनाक बताया जा रहा है, भारत में ये तीसरी लहर के रूप में आ सकता है।
केंद्र सरकार से मेरी अपील: 1. सिंगापुर के साथ हवाई सेवाएं तत्काल प्रभाव से रद्द हों 2. बच्चों के लिए भी वैक्सीन के विकल्पों पर प्राथमिकता के आधार पर काम हो