ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರೂ ಕೃಷಿ ಕಾಯ್ದೆಗಳ ಪ್ರತಿಯನ್ನು ದೆಹಲಿ ವಿಧಾನಸಭೆಯಲ್ಲಿ ಹರಿದು ಹಾಕಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಬ್ರಿಟೀಷರಿಗಿಂತ ಕೆಟ್ಟವರಾಗಬಾರದು’ ಎಂದು ಕಟು ಶಬ್ಧಗಳಿಂದ ಟೀಕಿಸಿದ್ದಾರೆ. ಇದೇವೇಳೆ, ‘ಕೊರೋನಾ ಸಂಕಷ್ದದಸಂದರ್ಭದಲ್ಲಿ ಕೃಷಿ ಕಾಯ್ದೆಗಳನ್ನ ತರಾತುರಿಯಲ್ಲಿ ಜಾರಿಮಾಡುವ ಅಗತ್ಯವೇನಿತ್ತು?’ ಎಂದು ವಿಶೇಷ ಅಧಿವೇಶನದಲ್ಲಿ ಕೇಜ್ರಿವಾಲ್, ಕೇಂದ್ರಸರ್ಕಾರವನ್ನು ಪ್ರಶ್ನಿಸಿದ್ದಾರೆ.