ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು,'ಘಟನೆಯು ತುಂಬಾ ನೋವಿನಿಂದ ಕೂಡಿದೆ. ಸಂತ್ರಸ್ತೆಯ ಕುಟುಂಬದೊಂದಿಗೆ ಸರ್ಕಾರ ನಡೆದುಕೊಂಡಿರುವ ರೀತಿ ಸರಿಯಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ಜೀವಿಸುತ್ತಿದ್ದೇವೆ. ಅಧಿಕಾರಿದಲ್ಲಿರುವ ಜನರು ಈ ದೇಶದ ಸೇವಕರೇ ಹೊರತು ಮಾಲೀಕರಲ್ಲ ಎಂಬುದನ್ನು ಮರೆಯಬಾರದು' ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಮೂಲಕ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.