ನವದೆಹಲಿ: ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇತರೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಹೆಚ್ಚುವರಿಯಾಗಿರುವ ಆಮ್ಲಜನಕ ಸಂಗ್ರಹವನ್ನು ಕಳುಹಿಸುವಂತೆ ಶನಿವಾರ ಮನವಿ ಮಾಡಿದ್ದಾರೆ.
ಗಂಭೀರ ಸ್ಥಿತಿಯಲ್ಲಿರುವ ಕೋವಿಡ್–19 ರೋಗಿಗಳ ಚಿಕಿತ್ಸೆ ಆಮ್ಲಜನಕ ಕೊರತೆಯಿಂದ ಸಾಧ್ಯವಾಗುತ್ತಿಲ್ಲ, ದೆಹಲಿಯಲ್ಲಿ ಉಸಿರಾಟದ ಸಮಸ್ಯೆಯಿಂದ ನೂರಾರು ಮಂದಿ ಸಾವಿಗೀಡಾಗಿದ್ದಾರೆ.
'ಹೆಚ್ಚುವರಿ ಆಮ್ಲಜನಕ ಸಂಗ್ರಹವಿದ್ದರೆ ದೆಹಲಿಗೆ ಪೂರೈಕೆ ಮಾಡುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಮುಖೇನ ಮನವಿ ಮಾಡುತ್ತಿದ್ದೇನೆ. ಕೇಂದ್ರ ಸರ್ಕಾರವು ಸಹಕಾರ ನೀಡುತ್ತಿದ್ದರೂ, ಕೊರೊನಾ ತೀವ್ರತೆಯು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಾಲದಾಗಿಸಿದೆ' ಎಂದು ಟ್ವೀಟ್ ಮಾಡಿದ್ದಾರೆ.
I am writing to all CMs requesting them to provide oxygen to Delhi, if they have spare. Though Central govt. is also helping us, the severity of corona is such that all available resources are proving inadequate.