ಆಕಾರ್ ಪಟೇಲ್ ಅವರ ವಿರುದ್ಧ ಹೊರಡಿಸಲಾಗಿರುವ ಲುಕ್ಔಟ್ ನೋಟಿಸ್ ಅನ್ನು ಹಿಂಪಡೆಯಬೇಕು. ಅಲ್ಲದೆ ಕ್ಷಮಾಪಣೆ ಕೋರಬೇಕೆಂಬ ಮ್ಯಾಜಿಸ್ಟೇಟ್ ನ್ಯಾಯಾಲಯದ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಸಿಬಿಐ ಮನವಿ ಮಾಡಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂತೋಷ್ ಸ್ನೇಹಿ ಮಾನ್ ಅವರು, ಈ ಆದೇಶವನ್ನು ನೀಡಿದ್ದಾರೆ. ಅಲ್ಲದೆ ಈ ಕುರಿತ ಹೆಚ್ಚಿನ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಲಾಗಿದೆ.