ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರದಲ್ಲಿ ಕೆಂಪುಕೋಟೆಗೆ ಹಾನಿ ಪ್ರಕರಣ: ಆರೋಪಿ ದೀಪ್ ಸಿಧುಗೆ ಜಾಮೀನು

Last Updated 26 ಏಪ್ರಿಲ್ 2021, 8:30 IST
ಅಕ್ಷರ ಗಾತ್ರ

ನವದೆಹಲಿ: ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ ಕೆಂಪುಕೋಟೆಗೆ ಹಾನಿ ಮಾಡಿದ ಪ್ರಕರಣದಡಿ ಬಂಧನಕ್ಕೊಳಗಾಗಿದ್ದ ನಟ–ಹೋರಾಟಗಾರ ದೀಪ್ ಸಿಧು ಅವರಿಗೆ ದೆಹಲಿ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಾಹಿಲ್ ಗುಪ್ತಾ ಅವರು, ಸಿಧುಗೆ ₹25 ಸಾವಿರ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತದ ಮುಚ್ಚಳಿಕೆ ಬರೆಸಿಕೊಂಡು ಜಾಮೀನು ನೀಡಿದ್ದಾರೆ.

ಕೆಂಪುಕೋಟೆ ಬಳಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಿಧುವನ್ನು ಏಪ್ರಿಲ್‌ 17ರಂದು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT