<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಇಂದಿನಿಂದ ಮತ್ತೆ ತೆರೆಯಲಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರು ಸರ್ಕಾರಿ ಶಾಲೆಗಳ ಹೆಣ್ಣು ಮಕ್ಕಳೊಂದಿಗೆ ಮಾತುಕತೆ ನಡೆಸಿದರು.</p>.<p>ಬಳಿಕ ಮಾತನಾಡಿದ ಸಿಸೋಡಿಯಾ, ‘ಕೊರೊನಾವೈರಸ್ ಸಮಯವು ಅತ್ಯಂತ ಕಠಿಣವಾಗಿತ್ತು. ಆದರೆ, ಅದನ್ನುಪ್ರಬುದ್ಧವಾಗಿ ಎದುರಿಸಬೇಕಾಗಿತ್ತು. ಹಾಗಾಗಿ ಶಾಲೆಗಳನ್ನು ಮುಚ್ಚಲಾಯಿತು. 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳೀಗೆ 15 ದಿನಗಳ ಹಿಂದೆ ತೆರೆಯಲಾಗಿದೆ. ಇದೀಗ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳೂ ಶಾಲೆಗೆ ಮರಳುತ್ತಿರುವುದರಿಂದ ನಾನು ಸಂತಸಗೊಂಡಿದ್ದೇನೆ. ನಾನೀಗ ಅವರ ನಗುಮುಖಗಳನ್ನು ನೋಡಬಲ್ಲೆ. ಸಾಂಕ್ರಾಮಿಕದ ಹೊತ್ತಿನಲ್ಲಿ ಶಾಲೆಗಳನ್ನು ತೆರೆಯುವುದು ಸವಾಲಿನ ಸಂಗತಿಯಾದರೂ ಅದನ್ನು ನಾವು ಸ್ವೀಕರಿಸಲೇಬೇಕು’ ಎಂದು ತಿಳಿಸಿದ್ದಾರೆ.</p>.<p>ಗಾಂಧಿ ನಗರ ಸರ್ಕಾರಿ ಬಾಲಕಿಯರ ಶಾಲೆಗೆ ಭೇಟಿ ನೀಡಿದ ಸಚಿವರು, ಸುರಕ್ಷತೆಯ ದೃಷ್ಟಿಯಿಂದ ಶಾಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಕೆಲವು ವಿದ್ಯಾರ್ಥಿಗಳು, ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಆನ್ಲೈನ್ ಪಾಠಕ್ಕಿಂತ ಶಾಲೆಗೆ ಬಂದು ಕೇಳುವುದೇ ಉತ್ತಮ. ನಮ್ಮ ಅನುಮಾನಗಳ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಬಹುದು ಎಂದುಸಿಸೋಡಿಯಾಗೆ ತಿಳಿಸಿದರು.</p>.<p>ಜನವರಿ 18 ರಂದು 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲಾಗಿತ್ತು. ಪೋಷಕರ ಒಪ್ಪಿಗೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ಶಾಲೆಗಳಿಗೆ ಬರಬಹುದು ಎಂದು ಸರ್ಕಾರ ಈಗಾಗಲೆ ತಿಳಿಸಿದೆ.</p>.<p>ದೆಹಲಿಯಲ್ಲಿ ಇದುವರೆಗೆ ಒಟ್ಟು 6,35,639 ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 6,23,574 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 10,871 ಮಂದಿ ಮೃತಪಟ್ಟಿದ್ದು, ಇನ್ನೂ 1,194 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಇಂದಿನಿಂದ ಮತ್ತೆ ತೆರೆಯಲಾಗಿದ್ದು, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರು ಸರ್ಕಾರಿ ಶಾಲೆಗಳ ಹೆಣ್ಣು ಮಕ್ಕಳೊಂದಿಗೆ ಮಾತುಕತೆ ನಡೆಸಿದರು.</p>.<p>ಬಳಿಕ ಮಾತನಾಡಿದ ಸಿಸೋಡಿಯಾ, ‘ಕೊರೊನಾವೈರಸ್ ಸಮಯವು ಅತ್ಯಂತ ಕಠಿಣವಾಗಿತ್ತು. ಆದರೆ, ಅದನ್ನುಪ್ರಬುದ್ಧವಾಗಿ ಎದುರಿಸಬೇಕಾಗಿತ್ತು. ಹಾಗಾಗಿ ಶಾಲೆಗಳನ್ನು ಮುಚ್ಚಲಾಯಿತು. 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳೀಗೆ 15 ದಿನಗಳ ಹಿಂದೆ ತೆರೆಯಲಾಗಿದೆ. ಇದೀಗ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳೂ ಶಾಲೆಗೆ ಮರಳುತ್ತಿರುವುದರಿಂದ ನಾನು ಸಂತಸಗೊಂಡಿದ್ದೇನೆ. ನಾನೀಗ ಅವರ ನಗುಮುಖಗಳನ್ನು ನೋಡಬಲ್ಲೆ. ಸಾಂಕ್ರಾಮಿಕದ ಹೊತ್ತಿನಲ್ಲಿ ಶಾಲೆಗಳನ್ನು ತೆರೆಯುವುದು ಸವಾಲಿನ ಸಂಗತಿಯಾದರೂ ಅದನ್ನು ನಾವು ಸ್ವೀಕರಿಸಲೇಬೇಕು’ ಎಂದು ತಿಳಿಸಿದ್ದಾರೆ.</p>.<p>ಗಾಂಧಿ ನಗರ ಸರ್ಕಾರಿ ಬಾಲಕಿಯರ ಶಾಲೆಗೆ ಭೇಟಿ ನೀಡಿದ ಸಚಿವರು, ಸುರಕ್ಷತೆಯ ದೃಷ್ಟಿಯಿಂದ ಶಾಲೆಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಕೆಲವು ವಿದ್ಯಾರ್ಥಿಗಳು, ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಆನ್ಲೈನ್ ಪಾಠಕ್ಕಿಂತ ಶಾಲೆಗೆ ಬಂದು ಕೇಳುವುದೇ ಉತ್ತಮ. ನಮ್ಮ ಅನುಮಾನಗಳ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಬಹುದು ಎಂದುಸಿಸೋಡಿಯಾಗೆ ತಿಳಿಸಿದರು.</p>.<p>ಜನವರಿ 18 ರಂದು 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ತೆರೆಯಲಾಗಿತ್ತು. ಪೋಷಕರ ಒಪ್ಪಿಗೆ ಇದ್ದರೆ ಮಾತ್ರವೇ ವಿದ್ಯಾರ್ಥಿಗಳು ಶಾಲೆಗಳಿಗೆ ಬರಬಹುದು ಎಂದು ಸರ್ಕಾರ ಈಗಾಗಲೆ ತಿಳಿಸಿದೆ.</p>.<p>ದೆಹಲಿಯಲ್ಲಿ ಇದುವರೆಗೆ ಒಟ್ಟು 6,35,639 ಕೋವಿಡ್–19 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 6,23,574 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 10,871 ಮಂದಿ ಮೃತಪಟ್ಟಿದ್ದು, ಇನ್ನೂ 1,194 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>