ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐನಿಂದ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮನೀಷ್ ಸಿಸೋಡಿಯಾ

Last Updated 28 ಫೆಬ್ರವರಿ 2023, 6:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವ ಸಿಬಿಐ ನಡೆ ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತಂತೆ ತುರ್ತು ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಪೀಠದ ಎದುರು ಹಿರಿಯ ವಕೀಲ ಎ.ಎಂ. ಸಿಂಘ್ವಿ ಮನವಿ ಮಾಡಿದರು.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಹೈಕೋರ್ಟ್‌ಗೆ ಹೋಗಬಹುದು ಎಂದು ನ್ಯಾಯಾಲಯವು ಆರಂಭದಲ್ಲಿ ಸೂಚಿಸಿತ್ತು. ಆದರೆ, ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯು ವಿನೋದ್ ದುವಾ ಪ್ರಕರಣದ ತೀರ್ಪಿನ ಅಡಿಯಲ್ಲಿ ಬರುತ್ತದೆ ಎಂದು ವಕೀಲರು ನ್ಯಾಯಾಲಯದ ಗಮನ ಸೆಳೆದರು.

ಹಲವು ಎಫ್‌ಐಆರ್‌ಗಳನ್ನು ಒಳಗೊಂಡಿದ್ದ ಕಾರಣ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಸಲ್ಲಿಸಿದ್ದ ಇದೇ ರೀತಿಯ ರಿಟ್ ಅರ್ಜಿಯನ್ನು ಪರಿಗಣಿಸಲಾಗಿದೆ ಎಂದು ನ್ಯಾಯಾಲಯ ಹೇಳಿತು.

ವಕೀಲರ ಪುನರಾವರ್ತಿತ ಮನವಿ ಬಳಿಕ ಮಂಗಳವಾರವೇ ಸಿಸೋಡಿಯಾ ಅವರ ಮನವಿಯನ್ನು ಆಲಿಸಲು ನ್ಯಾಯಾಲಯವು ಒಪ್ಪಿಕೊಂಡಿದೆ.

ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು 8 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ನಿನ್ನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಕೆ.ನಾಗ್ಪಾಲ್, ಸಿಸೋಡಿಯಾ ಅವರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದರು.

ಇವನ್ನೂ ಓದಿ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT