ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಅಧಿಕಾರಿಗಳಿಗೆ ನನ್ನ ಬ್ಯಾಂಕ್‌ ಲಾಕರ್‌ನಲ್ಲಿ ಏನೂ ಸಿಗುವುದಿಲ್ಲ: ಸಿಸೋಡಿಯಾ

Last Updated 29 ಆಗಸ್ಟ್ 2022, 13:03 IST
ಅಕ್ಷರ ಗಾತ್ರ

ನವದೆಹಲಿ: ತಮ್ಮ ಬ್ಯಾಂಕ್ ಲಾಕರ್ ಅನ್ನು ಪರಿಶೀಲಿಸಲು ಸಿಬಿಐ ಅಧಿಕಾರಿಗಳು ಮಂಗಳವಾರ ಬರಲಿದ್ದಾರೆ ಎಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಎಂದು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳಿಗೆ ಈ ಲಾಕರ್‌ಗಳಲ್ಲಿ ಏನೂ ಸಿಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

‘ನಾಳೆ(ಮಂಗಳವಾರ) ನಮ್ಮ ಬ್ಯಾಂಕ್ ಲಾಕರ್ ಪರಿಶೀಲಿಸಲು ಸಿಬಿಐ ಬರಲಿದೆ. ಆಗಸ್ಟ್ 19 ರಂದು ನನ್ನ ನಿವಾಸದಲ್ಲಿ 14 ಗಂಟೆಗಳ ಕಾಲ ನಡೆದ ಶೋಧದಲ್ಲಿ ಅವರಿಗೆ ಏನೂ ಸಿಗಲಿಲ್ಲ. ಲಾಕರ್‌ನಲ್ಲಿಯೂ ಏನೂ ಸಿಗುವುದಿಲ್ಲ. ನಾನು ಸಿಬಿಐ ಅಧಿಕಾರಿಗಳನ್ನುಸ್ವಾಗತಿಸುತ್ತೇನೆ. ನನ್ನ ಕುಟುಂಬ ಹಾಗೂ ನಾನು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ’ ಎಂದು ಟ್ವೀಟ್‌ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಅಕ್ರಮದ ಹಿನ್ನೆಲೆಯಲ್ಲಿ ಮನೀಶ್‌ ಸಿಸೋಡಿಯಾ ಅವರ ನಿವಾಸ, ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಕಳೆದ ವಾರ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT