ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ | ಸಿಸೋಡಿಯಾ ಏಪಿಲ್ 3ರ ವರೆಗೆ ನ್ಯಾಯಾಂಗ ಬಂಧನಕ್ಕೆ

Last Updated 20 ಮಾರ್ಚ್ 2023, 10:12 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ 14 ದಿನಗಳ ವರೆಗೆ ವಿಸ್ತರಿಸಲಾಗಿದೆ.

ಇದರಿಂದಾಗಿ ಸಿಸೋಡಿಯಾ ಅವರು ಏಪ್ರಿಲ್‌ 3ರ ವರೆಗೆ ನ್ಯಾಯಾಂಗ ಬಂಧನದಲ್ಲಿ ಉಳಿಯಲಿದ್ದಾರೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರ ಜಾರಿಗೊಳಿಸಿದ್ದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲ್ಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಫೆಬ್ರುವರಿ 26 ರಂದು ಬಂಧಿಸಿದ್ದರು. ಅವರನ್ನು ತಿಹಾರ್‌ ಜೈಲ್‌ನಲ್ಲಿರಿಸಲಾಗಿತ್ತು. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಿಸೋಡಿಯಾ ಅವರನ್ನು ಮಾರ್ಚ್‌ 9ರಂದು ಬಂಧಿಸಿತ್ತು.

ಇ.ಡಿ ಅಧಿಕಾರಿಗಳು ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕರಾಗಿರುವ ಸಿಸೋಡಿಯಾ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT