ರಸ್ತೆಗಳಲ್ಲಿ ಠಿಕಾಣಿ ಹೂಡುತ್ತಿರುವ ನೂರಾರು ರೈತರಿಗೆ ವಿದ್ಯುತ್ ಮತ್ತು ನೀರು ಸರಬರಾಜನ್ನು ಜಿಲ್ಲಾಡಳಿತ ಕಡಿತಗೊಳಿಸಿತ್ತು. ನವೆಂಬರ್ 26 ರಂದು ರೈತರು ತಮ್ಮ 'ದೆಹಲಿ ಚಲೋ' ಪ್ರತಿಭಟನೆಯನ್ನು ಪ್ರಾರಂಭಿಸಿದಾಗಿನಿಂದ ಗಾಜಿಪುರ ಗಡಿಯನ್ನು ಮುಚ್ಚಲಾಗಿತ್ತು. ಆದರೆ, ಮಂಗಳವಾರ, ರೈತರು ಬ್ಯಾರಿಕೇಡ್ಗಳನ್ನು ಮುರಿದು ತಮ್ಮ ಟ್ರಾಕ್ಟರ್ ರ್ಯಾಲಿಯನ್ನು ನಡೆಸಿದ್ದರು.